ಕುಂದಾಪುರ

ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ನೂತನ ವಕ್ರ್ಸ್‍ಶಾಪ್ ಉದ್ಘಾಟನೆ

Share

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ ನೂತನವಾಗಿ ನಿರ್ಮಿಸಿರುವ ಉಮಾನಾಥ ಮತ್ತು ದೇವರಾಜ್ ಗಾಣಿಗ ಅವರ ಮಾಲೀಕತ್ವದ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ಅದ್ದೂರಿಯಾಗಿ ನಡೆಯಿತು.
ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮ,ಲಕ್ಷ್ಮೀ ಪೂಜೆಯನ್ನು ನೆರವೇರಿಸಲಾಯಿತು.
ಲಾರಿ,ಇನ್ಸುಲೇಟರ್,ಮಿಲ್ಕ್ ವಾಹನ,ಬೂಲೆರೋ,ಬಸ್ ಮತ್ತು ಮಿನಿ ಬಸ್ ಸೇರಿದಂತೆ ಇನ್ನಿತರ ವಾಹನಗಳ ಬಾಡಿ ವಿನ್ಯಾಸ ಹಾಗೂ ಪೇಂಟಿಂಗ್ ಮತ್ತು ಡೇಟಿಂಗ್,ಸ್ಟಿಕ್ಕರ್ ಕಟಿಂಗ್ ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ವರ್ಕ್ ಶಾಪ್ ಶಾಪ್‍ನಲ್ಲಿ ಮಾಡಲಾಗುತ್ತದೆ.ಕ್ಲಪ್ತ ಸಮಯದಲ್ಲಿ ವಾಹನಗಳ ಕೆಲಸವನ್ನು ಮಾಡಿಕೊಡಲಾಗುತ್ತಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ದುರ್ಗಾಂಬಾ ವರ್ಕ್ ಶಾಪ್ ಭೇಟಿ ನೀಡಿ ತಮ್ಮ ವಾಹನಗಳನ್ನು ಅತ್ಯಾಕರ್ಷಕ ರೀತಿಯಲ್ಲಿ ವಿನ್ಯಾಸವನ್ನು ಮಾಡಿಕೊಳ್ಳಬಹುದಾಗಿದೆ.
ವಿಶ್ವನಾಥ್ ಅವರು ಮಾತನಾಡಿ,ಆಧುನಿಕ ಶೈಲಿಯ ಯಂತ್ರೋಪಕರಣಗಳನ್ನು ಹೊಂದಿರುವ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ವರ್ಕ್ ಶಾಪ್ ನಮ್ಮ ಪರಿಸರದಲ್ಲಿ ಆರಂಭಗೊಂಡಿರುವುದು ಬಹಳಷ್ಟು ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.ಬಾಡಿ ಬಿಲ್ಡರ್ಸ್ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳ ಕಾಲದ ಸುರ್ಧಿಘವಾದ ಅನುಭವ ಹೊಂದಿರುವ ಉಮಾನಾಥ ಮತ್ತು ದೇವರಾಜ್ ಅವರ ಅನುಭವ ಸಾಕಷ್ಟು ಪ್ರೌಡಿಮತ್ಯೆಯಿಂದ ಕೂಡಿದ್ದು ನುರಿತ ಕೆಲಸಗಾರರು ಕಾರ್ಯನಿರ್ವಹಿಸಲಿದ್ದಾರೆ.ಯುವಕರ ನವ ಉದ್ಯಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಹಿರಿಯ ಶಿಕ್ಷಕರಾದ ಭಾಸ್ಕರ ಗಾಣಿಗ ಮಾತನಾಡಿ,ತಾವು ಮಾಡುತ್ತಿರುವ ಕೆಲಸ ಕಾರ್ಯದ ಬಗ್ಗೆ ಬಹಳಷ್ಟು ಅನುಭವ ಪಡೆದು ನಂತರ ಸ್ವಂತ ಉದ್ಯಮವನ್ನು ಆರಂಭಿಸಿರುವುದರಿಂದ ವಾಹನಗಳ ಕೆಲಸ ಕಾರ್ಯವನ್ನು ಉತ್ತಮವಾದ ರೀತಿಯಲ್ಲಿ ಮಾಡಲಿದ್ದಾರೆ.ಯಾವುದೆ ಒಂದು ಕೆಲಸ ಮಾಡುವಾಗ ಆವೊಂದು ಕ್ಷೇತ್ರದಲ್ಲಿ ಜ್ಞಾನವನ್ನು ಹೊಂದಿರುವುದು ಬಹಳಷ್ಟು ಮಹತ್ವದವಾದ ಅಂಶವಾಗಿದೆ ಎಂದು ಅಭಿಪ್ರಾಯಪಟ್ಟರು.ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆ ದೊರಕುವಂತಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಮಾನಾಥ ಮತ್ತು ದೇವರಾಜ್ ಅವರ ಕುಟುಂಬಸ್ಥರು,ಸ್ನೇಹಿತರು,ಹಿತೈಷಿಗಳು ಉಪಸ್ಥಿತರಿದ್ದರು.ಅರ್ಚಕರು ಧಾರ್ಮಿಕ ಕಾರ್ಯವನ್ನು ನೆರವೇರಿಸಿಕೊಟ್ಟರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago