ಕುಂದಾಪುರ

ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ನೂತನ ವಕ್ರ್ಸ್‍ಶಾಪ್ ಉದ್ಘಾಟನೆ

Share

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಿಪಾಡಿ- ಗುಹೇಶ್ವರ ರಸ್ತೆ ಮುಖ ಮಂಟಪ ಸಮೀಪ ನೂತನವಾಗಿ ನಿರ್ಮಿಸಿರುವ ಉಮಾನಾಥ ಮತ್ತು ದೇವರಾಜ್ ಗಾಣಿಗ ಅವರ ಮಾಲೀಕತ್ವದ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಶುಭಾರಂಭ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ಅದ್ದೂರಿಯಾಗಿ ನಡೆಯಿತು.
ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಗಣಹೋಮ,ಲಕ್ಷ್ಮೀ ಪೂಜೆಯನ್ನು ನೆರವೇರಿಸಲಾಯಿತು.
ಲಾರಿ,ಇನ್ಸುಲೇಟರ್,ಮಿಲ್ಕ್ ವಾಹನ,ಬೂಲೆರೋ,ಬಸ್ ಮತ್ತು ಮಿನಿ ಬಸ್ ಸೇರಿದಂತೆ ಇನ್ನಿತರ ವಾಹನಗಳ ಬಾಡಿ ವಿನ್ಯಾಸ ಹಾಗೂ ಪೇಂಟಿಂಗ್ ಮತ್ತು ಡೇಟಿಂಗ್,ಸ್ಟಿಕ್ಕರ್ ಕಟಿಂಗ್ ಶ್ರೀ ದುರ್ಗಾಂಬಾ ಬಾಡಿ ಬಿಲ್ಡರ್ಸ್ ವರ್ಕ್ ಶಾಪ್ ಶಾಪ್‍ನಲ್ಲಿ ಮಾಡಲಾಗುತ್ತದೆ.ಕ್ಲಪ್ತ ಸಮಯದಲ್ಲಿ ವಾಹನಗಳ ಕೆಲಸವನ್ನು ಮಾಡಿಕೊಡಲಾಗುತ್ತಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ದುರ್ಗಾಂಬಾ ವರ್ಕ್ ಶಾಪ್ ಭೇಟಿ ನೀಡಿ ತಮ್ಮ ವಾಹನಗಳನ್ನು ಅತ್ಯಾಕರ್ಷಕ ರೀತಿಯಲ್ಲಿ ವಿನ್ಯಾಸವನ್ನು ಮಾಡಿಕೊಳ್ಳಬಹುದಾಗಿದೆ.
ವಿಶ್ವನಾಥ್ ಅವರು ಮಾತನಾಡಿ,ಆಧುನಿಕ ಶೈಲಿಯ ಯಂತ್ರೋಪಕರಣಗಳನ್ನು ಹೊಂದಿರುವ ಶ್ರೀ ದುಗಾರ್ಂಬಾ ಬಾಡಿ ಬಿಲ್ಡರ್ಸ್ ವರ್ಕ್ ಶಾಪ್ ನಮ್ಮ ಪರಿಸರದಲ್ಲಿ ಆರಂಭಗೊಂಡಿರುವುದು ಬಹಳಷ್ಟು ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.ಬಾಡಿ ಬಿಲ್ಡರ್ಸ್ ಕ್ಷೇತ್ರದಲ್ಲಿ ಸುಮಾರು 15 ವರ್ಷಗಳ ಕಾಲದ ಸುರ್ಧಿಘವಾದ ಅನುಭವ ಹೊಂದಿರುವ ಉಮಾನಾಥ ಮತ್ತು ದೇವರಾಜ್ ಅವರ ಅನುಭವ ಸಾಕಷ್ಟು ಪ್ರೌಡಿಮತ್ಯೆಯಿಂದ ಕೂಡಿದ್ದು ನುರಿತ ಕೆಲಸಗಾರರು ಕಾರ್ಯನಿರ್ವಹಿಸಲಿದ್ದಾರೆ.ಯುವಕರ ನವ ಉದ್ಯಮಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಹಿರಿಯ ಶಿಕ್ಷಕರಾದ ಭಾಸ್ಕರ ಗಾಣಿಗ ಮಾತನಾಡಿ,ತಾವು ಮಾಡುತ್ತಿರುವ ಕೆಲಸ ಕಾರ್ಯದ ಬಗ್ಗೆ ಬಹಳಷ್ಟು ಅನುಭವ ಪಡೆದು ನಂತರ ಸ್ವಂತ ಉದ್ಯಮವನ್ನು ಆರಂಭಿಸಿರುವುದರಿಂದ ವಾಹನಗಳ ಕೆಲಸ ಕಾರ್ಯವನ್ನು ಉತ್ತಮವಾದ ರೀತಿಯಲ್ಲಿ ಮಾಡಲಿದ್ದಾರೆ.ಯಾವುದೆ ಒಂದು ಕೆಲಸ ಮಾಡುವಾಗ ಆವೊಂದು ಕ್ಷೇತ್ರದಲ್ಲಿ ಜ್ಞಾನವನ್ನು ಹೊಂದಿರುವುದು ಬಹಳಷ್ಟು ಮಹತ್ವದವಾದ ಅಂಶವಾಗಿದೆ ಎಂದು ಅಭಿಪ್ರಾಯಪಟ್ಟರು.ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆ ದೊರಕುವಂತಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಮಾನಾಥ ಮತ್ತು ದೇವರಾಜ್ ಅವರ ಕುಟುಂಬಸ್ಥರು,ಸ್ನೇಹಿತರು,ಹಿತೈಷಿಗಳು ಉಪಸ್ಥಿತರಿದ್ದರು.ಅರ್ಚಕರು ಧಾರ್ಮಿಕ ಕಾರ್ಯವನ್ನು ನೆರವೇರಿಸಿಕೊಟ್ಟರು.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago