ಕುಂದಾಪುರ

ತ್ರಾಸಿ:ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ ಉದ್ಘಾಟನೆ

Share

ಕುಂದಾಪುರ:ತ್ರಾಸಿ ರಾ.ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣಗೊಂಡ ಧನುಷ್ ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್, ಲಾಡ್ಡಿಂಗ್ ಇದರ ಪ್ರವೇಶೋತ್ಸವ ಹಾಗೂ ಉದ್ಘಾಟನಾ ಕಾರ್ಯಕ್ರಮ ಜು.12ರಂದು ಶುಕ್ರವಾರ ಅದ್ದೂರಿಯಾಗಿ ನಡೆಯಿತು.ಬೆಳಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಜರಗಿತು.
ಧನುಷ್ ಟವರ್ಸ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್‍ನಲ್ಲಿ ಎಸಿ ನಾನ್ ಎಸಿ ಮಲ್ಟಿಕುಶನ್,
ನಾನ್‍ವೆಜ್,ವೆಜ್ ರೆಸ್ಟೋರೆಂಟ್,ಎಸಿ ನಾನ್ ಎಸಿ ರೂಮ್,ಪಾರ್ಟಿ ಹಾಲ್,ಲಿಫ್ಟ್ ವ್ಯವಸ್ಥೆ,ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇದೆ.
ಶಿವಮೊಗ್ಗ ಹೋಟೆಲ್ ಶ್ರೀರಾಮ ರೆಸಿಡೆನ್ಸಿ ಮಾಲೀಕ ಹಾಗು ಶಿವಮೊಗ್ಗ ಮಾನಸ ಇಂಟರ್ ನ್ಯಾಶನಲ್ ಸ್ಕೂಲ್ ಅಧ್ಯಕ್ಷ ಎಚ್. ಸುಬ್ಬಯ್ಯ ಉದ್ಘಾಟಿಸಿ ಮಾತನಾಡಿ,ತ್ರಾಸಿ ಬೀಚ್ ಸನೀಹ ಹೋಟೆಲ್,ಲಾಡ್ಜಿಂಗ್ ಉದ್ಯಮದಿಂದ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದ್ದು ಉದ್ಯೋಗ ಅವಕಾಶಕ್ಕೆ ಸಹಾಯಕವಾಗುತ್ತದೆ ಎಂದು ನೂತನ ಉದ್ಯಮಕ್ಕೆ ಶುಭ ಹಾರೈಸಿದರು.
ಧನುಷ್ ಟವರ್ಸ್ ಹೋಟೆಲ್ ಪಿಜಿಪಿ ಬೀಚ್ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಮಾಲೀಕರಾದ ದಾಕ್ಷಾಯಿಣಿ ಪರಮೇಶ್ವರ ಗಾಣಿಗ ಬಿ ಮಾತನಾಡಿ,ಪ್ರವಾಸೋದ್ಯಮ ಚಟುವಟಿಕೆ ಪ್ರೇರಣೆ ನೀಡುವ ದೃಷ್ಟಿ ಕೋನದಿಂದ ಇವೊಂದು ಉದ್ಯಮವನ್ನು ಆರಂಭಿಸಲಾಗಿದ್ದು.ಪ್ರವಾಸಿಗರಿಗೆ ಉತ್ತಮವಾದ ರೀತಿಯ ಸೇವೆಯನ್ನು ಮೌಲ್ಯವರ್ಧಿತ ದರದಲ್ಲಿ ನೀಡಲಾಗುತ್ತದೆ.ಪ್ರವಾಸಿಗರು ಮತ್ತು ಸ್ಥಳೀಯ ಗ್ರಾಹಕರು ನಮ್ಮ ಸಂಸ್ಥೆಗೆ ಭೇಟಿ ನೀಡಿ ಬೆಂಬಲವನ್ನು ನೀಡಬೇಕೆಂದು ವಿನಂತಿಸಿಕೊಂಡರು.
ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ ಎಂ.ಡಿ.ಬಿಜೂರು ಅಧ್ಯಕ್ಷತೆ ವಹಿಸಿ ಮಾತನಾಡಿ,ತ್ರಾಸಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಪ್ರದೇಶದಲ್ಲಿ ಸುಸಜ್ಜಿತವಾದ ಬಹು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿರುವುದರಿಂದ ಉದ್ಯೋಗವಕಾಶದ ಜತಡಗೆ ಊರಿನ ಅಭವೃದ್ಧಿಗೂ ಸಹಕಾರಿ ಆಗಲಿದೆ.ವಿಶ್ವ ಮಾನ್ಯತೆ ಪಡೆದಿರುವ ತ್ರಾಸಿ ಮರವಂತೆ ಬೀಚ್ ಪ್ರವಾಸೋದ್ಯಮಕ್ಕೆ ಉತ್ತಮವಾದ ಅವಕಾಶಗಳಿದ್ದು.ಇಲ್ಲಿ ಆರಂಭಿಸಿರುವ ನವ ಉದ್ಯಮ ಯಶಸ್ಸು ಕಾಣಲಿದೆ ಎಂದು ಹೇಳಿದರು.
ಧನುಷ್ ಟವರ್ಸ್ ಅಭಿನಂದನ.ಪಿ ಗಾಣಿಗ ಮಾತನಾಡಿ,ತ್ರಾಸಿ-ಮರವಂತೆ ಬೀಚ್ ವಿಶ್ವಮಾನ್ಯತೆ ಪಡೆದುಕೊಂಡಿದೆ.ಬೀಚ್ ನೋಡಲು ಸಾವಿರಾರು ಜನರು ದಿನಂಪ್ರತಿ ಭೇಟಿ ನೀಡುತ್ತಾರೆ.ಪ್ರವಾಸಿಗರಿಗೆ ಅನುಕೂಲವಾಗುವ ದೃಷ್ಟಿಯಿಂದ ಮತ್ತು ಉತ್ತಮವಾದ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಇವೊಂದು ಸಂಸ್ಥೆಯನ್ನು ಆರಂಭಿಸಲಾಗಿದೆ ಎಂದರು.
ಹೋಟೆಲ್ ಪಿಜಿಪಿ ಬೀಚ್ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಪಾಲುದಾರರಾದ ದಯಾನಂದ ಶ್ರೀಯಾನ್ ಮಾತನಾಡಿ,ಹಲವಾರು ವರ್ಷಗಳಿಂದ ಮುಂಬೈನಲ್ಲಿ ಉದ್ಯಮವನ್ನು ಆರಂಭಿಸಿಕೊಂಡು ಬರಲಾಗುತ್ತಿದ್ದು.ಊರಿನಲ್ಲಿ ಉದ್ಯಮವನ್ನು ಆರಂಭಿಸಬೇಕು ಎನ್ನುವ ಉದ್ದೇಶದಿಂದ ಹೊಸ ಪ್ರಯತ್ನಕ್ಕೆ ಕೈ ಹಾಕಲಾಗಿದ್ದು ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಕುಂದಾಪುರ ಶ್ರೀ ವೇಣುಗೋಪಾಲಕ್ರಷ್ಣ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ರಮೇಶ ಗಾಣಿಗ,ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ರಿ. ಬಾರ್ಕೂರು ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಡಪಾಡಿ, ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ರಿ. ಅಧ್ಯಕ್ಷ ಸತೀಶ್ ಗಾಣಿಗ ಕುಂದಾಪುರ, ಉದ್ಯಮಿ ಮಧುಕರ ಪೂಜಾರಿ, ಕನ್ಸ್ ಲ್ಟಿಂಗ್ ಸಿವಿಲ್ ಇಂಜಿನಿಯರ್ ಕುಂದಾಪುರ ದಿನೇಶ್ ಹೆಗ್ಡೆ, ಶಾಲಿನಿ ಎ.ಗಾಣಿಗ, ಅಭಿನಂದನ ಪಿ.ಗಾಣಿಗ, ಮಾಸ್ಟರ್ ಧನುಷ್ ಎ. ಗಾಣಿಗ, ದಾಕ್ಷಾಯಿಣಿ,ಹೋಟೆಲ್ ಪಿಜಿಪಿ ಬೀಚ್ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಪಾಲುದಾರರಾದ ಕುಶಲ ಶೆಟ್ಟಿ,ಮಹೇಶ್ ಪೂಜಾರಿ,ಮಧುಕರ ಪೂಜಾರಿ,ನಾಗರಾಜ ದೇವಾಡಿಗ ಉಪಸ್ಥಿತರಿದ್ದರು.
ತ್ರಾಸಿ ಧನುಷ್ – ಟವರ್ ಹೊಟೇಲ್ ಪಿಜಿಬಿ,ಬೀಚ್ ರೆಸಿಡೆನ್ಸಿ ಬೋಡಿರ್ಂಗ್,ಲಾಡ್ಡಿಂಗ್ ಇದರ ಮಾಲಕ ಪರಮೇಶ್ವರ ಗಾಣಿಗ ಬಿ. ಸ್ವಾಗತಿಸಿದರು.ಶಿಕ್ಷಕ ಚಂದ್ರಶೇಖರ ಬಿಜಾಡಿ ನಿರೂಪಿಸಿದರು.ಉಪ್ಪುಂದ ಸುಬ್ರಹ್ಮಣ್ಯ ಜಿ. ಗಾಣಿಗ ವಂದಿಸಿದರು.

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago