ಕುಂದಾಪುರ

ಲಾರಿ ಚಾಸಿಸಿ ಬಳಸಿ ವಿನೂತನ ಮಾದರಿಯಲ್ಲಿ ನಿರ್ಮಿಸಿದ ಕಾಲುಸಂಕ:ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಉದ್ಘಾಟನೆ

Share

Advertisement
Advertisement
Advertisement

ಕುಂದಾಪುರ:ವಿನೂತನ ತಂತ್ರಜ್ಞಾನ ಬಳಸಿ ಕಾಲುಸಂಕ ನಿರ್ಮಿಸುವ ಮೂಲಕ ಗ್ರಾಮೀಣ ಜನರ ಅನೇಕ ದಶಕಗಳ ಕನಸನ್ನು ನನಸು ಮಾಡಿರುವುದರ ಬಗ್ಗೆ ಹೆಮ್ಮೆಯಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಸಮೃದ್ಧ ಬೈಂದೂರು ಪರಿಕಲ್ಪನೆಯಡಿಲ್ಲಿ ಬೆಂಗಳೂರಿನ ಡಾ.ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಸಹಕಾರದೊಂದಿಗೆ ಯಡಮೊಗೆಯ ರಾಂಪಯ್ಯಜಡ್ಡು ಹಾಗೂ ಕುಮ್ಟಿಬೇರು ಸಂಪರ್ಕಿಸುವ ಮತ್ತು ತೊಂಬಟ್ಟುವಿನ ಕಬ್ಬಿನಾಲೆ – ಗುಡ್ಡಿಮನೆ ಸಂಪರ್ಕಿಸುವಲ್ಲಿ ಅತ್ಯಾಧುನಿಕ ಮಾದರಿಯ ಮತ್ತು ಹಳೆಯ ಬಸ್‌,ಲಾರಿಗಳ ಚಾಸಿಸಿ ಬಳಸಿ ನಿರ್ಮಾಣಗೊಂಡ ಕಾಲುಸಂಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಸರ್ಕಾರಿ ವ್ಯವಸ್ಥೆಯ ಮೂಲಕ ಕಾಲು ಸಂಕ ನಿರ್ಮಿಸಲು ಅಸಾಧ್ಯ ಎನ್ನುವುದು ನಮ್ಮ ಗಮನದಲ್ಲಿತ್ತು.ಆದರೆ ಹಾಗೆಯೇ ಬಿಟ್ಟರೆ ನಮ್ಮ ಜನರ ಸಮಸ್ಯೆಯೂ ಬಗೆಹರಿಯುವುದಿಲ್ಲ ಎನ್ನುವುದೂ ಕೂಡಾ ಅರಿವಿತ್ತು. ಇದಕ್ಕಾಗಿ ನಾನು ಮತ್ತು ಅನುದೀಪ್ ಹೆಗ್ಡೆ ಅವರು ಸೇತುವೆಯ ರೀತಿಯಲ್ಲಿ ದಾನಿಗಳನ್ನು ಜೋಡಿಸುವ ಕೆಲಸ ಮಾಡಿದ್ದೇವೆ ಅಷ್ಟೇ, ಉಳಿದೆಲ್ಲವೂ ಕೂಡಾ ದೇವರು ದಾನಿಗಳ ಮೂಲಕ ಮಾಡಿಸಿದ್ದಾರೆ.ದೂರದ ಬೆಂಗಳೂರಿನಲ್ಲಿ ಕುಳಿತು ಅರುಣಾಚಲಮ್ ಟ್ರಸ್ಟ್ ನಮ್ಮ ಬೈಂದೂರಿನ ಕ್ಷೇತ್ರದ ಗ್ರಾಮೀಣ ಭಾಗದ ಬಗ್ಗೆ ಯೋಚಿಸುತ್ತದೆ ಎಂದರೆ ಅಂತಹ ಸಂಸ್ಥೆಗೆ ನಾವು ಎಷ್ಟು ಚಿರಋಣಿಗಳಾಗಿದ್ದರೂ ಸಾಲದು ಎಂದು ಅಭಿಪ್ರಾಯಿಸಿ ಟ್ರಸ್ಟ್ ಸಹಕಾರ ಮತ್ತು ಸ್ಥಳೀಯ ಜನರ ಶ್ರಮದಿಂದ ಇಂದು ಸುಸಜ್ಜಿತ ಕಾಲು ಸಂಕ ನಿರ್ಮಾಣಗೊಂಡಿದೆ. ಅರುಣಾಚಲಂ ಟ್ರಸ್ಟ್ ಮುಖ್ಯಸ್ಥರಿಗೆ, ಪದಾಧಿಕಾರಿಗಳಿಗೆ ಹಾಗೂ ಸ್ಥಳೀಯರಿಗೆ ಧನ್ಯವಾದ ಸಲ್ಲಿಸಿದರು.
ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟಿಗಳು ಹಾಗೂ ದಾನಿಗಳಾದ ಡಾ.ಆರ್.ಅರುಣಾಚಲಮ್ ಅವರ ಸುಪುತ್ರರಾದ ಡಾ. ರಮೇಶ್‌ ಅರುಣ್‌ ಅವರು ಮಾತನಾಡಿ ಬೈಂದೂರಿಗೆ ಕಾಲು ಸಂಕಗಳ ಅನಿವಾರ್ಯತೆಯನ್ನು ಶಾಸಕರು ತಿಳಿಸಿದಾಗ ಜನರ ಪರಿಸ್ಥಿತಿ ನೆನೆದು ದುಃಖವಾಗಿತ್ತು.ಕೂಡಲೇ ತಂದೆಯ ಸೂಚನೆಯಂತೆ ಸ್ಥಳಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಅರಿತುಕೊಂಡು ಕಾಲುಸಂಕ ನಿರ್ಮಾಣಕ್ಕೆ ಸಹಕರಿಸುವ ಭರವಸೆ ನೀಡಿದ್ದೆವು.ಅದರಂತೆ ಇಂದು ಕಾಲುಸಂಕ ನಿರ್ಮಾಣಗೊಂಡಿದೆ. ಸಮಾಜಕಾರ್ಯ ಮಾಡಬೇಕೆಂದಾಗ ಅದಕ್ಕೆ ನಮ್ಮಲ್ಲಿನ ಬದ್ಧತೆಯ ಜೊತೆಗೆ ಸ್ಥಳೀಯರ ಇಚ್ಚಾ ಶಕ್ತಿಯು ಮುಖ್ಯವಾಗುತ್ತದೆ. ಬೈಂದೂರಿನಲ್ಲಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರ ಇಚ್ಛಾಶಕ್ತಿ, ಬದ್ಧತೆ, ತೊಡಗಿಸಿಕೊಳ್ಳುವಿಕೆ ಅಭೂತಪೂರ್ವವಾಗಿತ್ತು. ಅದರ ಫಲವಾಗಿ ಇಂದು ಕಾಲುಸಂಕ ನಿರ್ಮಾಣಗೊಂಡಿದೆ. ಗ್ರಾಮೀಣ ಜನರ ಸೇವೆ ಮಾಡುವಂತಹ ಅವಕಾಶ ಕಲ್ಪಿಸಿದ ಗಂಟಿಹೊಳೆ ಹಾಗೂ ಅವರ ತಂಡಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.
ಡಾ. ಆರ್. ಅರುಣಾಚಲಮ್ ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟಿಗಳಾದ ಡಾ. ರಮೇಶ್‌ ಅರುಣ್‌, ಬೆಂಗಳೂರು ಟ್ರಿಪ್‌ ನಿರ್ವಿಘ್ನ ಮಾರ್ಕೆಟಿಂಗ್‌ ಇದರ ಮುಖ್ಯಸ್ಥರಾದ ಅನುದೀಪ್‌ ಹೆಗ್ಡೆ,ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ಅಧ್ಯಕ್ಷರು ಬಿ.ಎಸ್.‌ ಸುರೇಶ್‌ ಶೆಟ್ಟಿ,ಹಿರಿಯರಾದ ಬಾಲಚಂದ್ರ ಭಟ್,ಯಡಮೊಗೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಾಣೇಶ್ ಯಡಿಯಾಲ್, ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಗಾಣಿಗ, ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇದರ ಆಡಳಿತ ಮೊಕ್ತೆಸರರಾದ ಸಚ್ಚಿದಾನಂದ ಚಾತ್ರ, ಉಳ್ಳೂರು ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ ಶೆಟ್ಟಿ, ಉಳ್ಳೂರು ಮಚ್ಚಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ಉಪಾಧ್ಯಕ್ಷ ಶೇಖರ ಪೂಜಾರಿ, ಅಮಾಸೆಬೈಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ, ಮಹಾಗಣಪತಿ ದೇವಸ್ಥಾನ ತೊಂಬಟ್ಟು ಧರ್ಮದರ್ಶಿಗಳು ಮತ್ತು ಆಡಳಿತ ಮೊಕ್ತೇಸರರಾದ ಸತ್ಯನಾರಾಯಣ ಉಡುಪ ಮತ್ತು ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಶ್ರೀ ಕೃಷ್ಣಾನಂದತೀರ್ಥಮಹಾಸ್ವಾಮಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…

1 week ago

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ “ಐಕ್ಯಂ” 2k25 ಕಾರ್ಯಕ್ರಮ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…

1 week ago

ಯುವಕ ಮಂಡಲ ತ್ರಾಸಿ 59ನೇ ವಾರ್ಷಿಕೋತ್ಸವ ಸಂಭ್ರಮ

ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…

2 weeks ago

ಕೃಷ್ಣ ಮಠ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ

ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…

2 weeks ago

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕ ಕ್ರೀಡಾಕೂಟ 2024-2025

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…

2 weeks ago

ಸ್ಕೈಡೈನಿಂಗ್ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಸಚಿವ

ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…

3 weeks ago