ಕುಂದಾಪುರ:ಜೆಸಿಐ ಕುಂದಾಪುರ ಸಿಟಿ,ಜ್ಯೂನಿಯರ್ ಸಿಟಿ ವಿಂಗ್ ಆಯೋಜನೆಯಲ್ಲಿ ಅಗ್ನಿಶಾಮಕ ದಳ ಕುಂದಾಪುರ ಠಾಣೆ ಸಹಭಾಗಿತ್ವದಲ್ಲಿ ಅಗ್ನಿನಂದಕ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹೆಮ್ಮಾಡಿ ಜನತಾ ಕಾಲೇಜಿನ ವಠಾರದಲ್ಲಿ ನಡೆಯಿತು.
ಜ್ಯೂನಿಯರ್ ಸಿಟಿ ವಿಂಗ್ ನ ಅಧ್ಯಕ್ಷರಾದ ಜೆಎಪ್ ಡಿ ಕಿರಣ್ ಅಧ್ಯಕ್ಷತೆ ವಹಿಸಿದ್ದರು.ಜ್ಯೂನಿಯರ್ ಜೆಸಿಐ ರಾಷ್ಟ್ರೀಯ ಮಟ್ಟದ ಸಂಯೋಜಕರ ಜೆಎಪ್ ಎಸ್ ರಾಜೇಶ್ ರಾಜನ್,ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ,ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಕುಂದಾಪುರ ಸಿಟಿ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್ ಉಪಸ್ಥಿತರಿದ್ದರು. ಕುಂದಾಪುರ ಅಗ್ನಿಶಾಮಕ ದಳದ ಠಾಣಾಧಿಕಾರಿ ವಿ.ಸುಂದರ್ ಅಗ್ನಿನಂದಕದ ಕುರಿತಾಗಿ ಸಂಕ್ಷಿಪ್ತ ಮಾಹಿತಿ ನೀಡಿದರು.ತದನಂತರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಜನತಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು,ಕಿರಣ್ ಕಾರ್ಯಕ್ರಮ ನಿರ್ವಹಿಸಿದರು,ಜನತಾ ಹೆಮ್ಮಾಡಿ ಪ್ರೌಢಶಾಲಾ ಸಹ-ಶಿಕ್ಷಕ ಜಗದೀಶ್ ವಂದಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…