ಕುಂದಾಪುರ:ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ವತಿಯಿಂದ ಮರವಂತೆ ಶ್ರೀ ಮಹಾರಾಜ ವರಾಹ ಸ್ವಾಮಿ ದೇವಸ್ಥಾನದ ಬೆಳ್ಳಿ ರಥ ನಿರ್ಮಾಣಕ್ಕೆ 10,00,101 ರೂ ಮೊತ್ತದ ಚೆಕ್ನ್ನು ಶುಕ್ರವಾರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹಸ್ತಾಂತರಿಸಲಾಯಿತು.
ಸಂಘದ ಅಧ್ಯಕ್ಷ ಉಪ್ಪುಂದ ಆನಂದ ಖಾರ್ವಿ ಮಾತನಾಡಿ, ಮೀನುಗಾರರು ಈ ಹಿಂದೆ ದೇವಸ್ಥಾನಕ್ಕೆ ಉಪ್ಪುಂದ ರಥವನ್ನು ನೀಡಿದ್ದು ಶ್ರೀ ದೇವರಲ್ಲಿ ಮೀನುಗಾರಿಕಾ ಉದ್ಯೋಗದಲ್ಲಿ ಸಮೃದ್ಧಿಯನ್ನು ಕರುಣಿಸುವ ಸಲುವಾಗಿ ಪ್ರಾರ್ಥಿಸಿದಂತೆ ಬೆಳ್ಳಿ ರಥದ ನಿರ್ಮಾಣಕ್ಕೆ ಸಂಘದ ಮೀನುಗಾರರ ವತಿಯಿಂದ ಈ ಕೊಡುಗೆ ನೀಡಲಾಗಿದೆ ಎಂದು ಹೇಳಿದರು.
ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಉಪ್ಪುಂದ ಆನಂದ ಖಾರ್ವಿ ಮತ್ತು ನೂತನ ಅಧ್ಯಕ್ಷ ಅಳ್ವೆಕೋಡಿ ನಾಗೇಶ ಖಾರ್ವಿ ಚೆಕ್ನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ನಾಯ್ಕ ಅವರಿಗೆ ಹಸ್ತಾಂತರಿಸಿದರು.ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದದ ಕಾರ್ಯದರ್ಶಿ ಪುರುಷೋತ್ತಮ ಖಾರ್ವಿ,ಕೋಶಾಕಾರಿ ಅಣ್ಣಯ್ಯ ಖಾರ್ವಿ,ಕಾರ್ಯಕಾರಿ ಮಂಡಳಿ ರಾಮ ಖಾರ್ವಿ,ಭಾಸ್ಕರ ಖಾರ್ವಿ,ಸುಬ್ರಹ್ಮಣ್ಯ ಖಾರ್ವಿ ಮತ್ತಿತರರು ಉಪಸ್ಥಿರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…