ಕುಂದಾಪುರ:ಭಾರಿ ಮಳೆಗೆ ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಲ್ಭಾಗದಲ್ಲಿರುವ ಶೇಡಕುಳಿ ಕೆರೆ ದಂಡೆ ಕುಸಿದು ಹೋಗಿದ್ದ ಘಟನೆ ಮಂಗಳವಾರ ನಡೆದಿದೆ.
ಕೆರೆ ದಂಡೆ ಕುಸಿದು ಹೋಗಿದ್ದರ ಪರಿಣಾಮ ಕೆರೆ ಕೇಳ ಭಾಗದಲ್ಲಿರುವ ಪ್ರವೀಣ್ ಚಂದ್ರಶೆಟ್ಟಿ ಅವರ ತೋಟಕ್ಕೆ ನೀರಿನೊಂದಿಗೆ ಮಣ್ಣು ನುಗ್ಗಿ ನೂರಾರು ಅಡಿಕೆ ಗಿಡ ಸಹಿತ ಬಾಳೆ ನಾಶವಾಗಿದೆ.ಘಟನೆಯಲ್ಲಿ ಲಕ್ಷಾಂತರ.ರೂ ನಷ್ಟ ಉಂಟಾಗಿದೆ.ಮೆಕೋಡು ದೇವಸ್ಥಾನದ ಅನ್ನ ಛತ್ರದ ಒಳಗೆ ಕೆರೆ ನೀರು ನುಗ್ಗಿದ್ದರಿಂದ ಕೇಸರು ಮಯವಾಗಿದ್ದು ಕಟ್ಟಡದೊಳಗೆ ಇದ್ದ ಅಮೂಲ್ಯವಾದ ಸ್ವತ್ತುಗಳಿಗೆ ಹಾನಿ ಉಂಟಾಗಿದೆ.
ಕೃಷಿಕ ಪ್ರವೀಣ್ ಚಂದ್ರ ಶೆಟ್ಟಿ ಮಾತನಾಡಿ,ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಮೆಕೋಡು ಪುರಾತನ ಕೆರೆ ದಂಡೆ ಕುಸಿದು ಹೋಗಿದೆ.ಕೆರೆ ನೀರು ಮತ್ತು ಮಣ್ಣು ತೋಟಕ್ಕೆ ನುಗ್ಗಿದ್ದರಿಂದ ನೂರಾರು ಅಡಿಕೆ ಸಸಿಗಳು,ಬಾಳೆ ಗಿಡ ನಾಶವಾಗಿದ್ದು ಲಕ್ಷಾಂತರ ನಷ್ಟ ಉಂಟಾಗಿದೆ.ಸರಕಾರ ಪರಿಹಾರವನ್ನು ನಿಡಬೇಕು ಎಂದರು.
ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮರ್ಶಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಭಾರಿ ಮಳೆಗೆ ಕೆರೆ ದಂಡೆ ಕುಸಿತಗೊಂಡಿದ್ದು ದೇವಸ್ಥಾನದಲ್ಲಿನ ಅನ್ನ ಛತ್ರಕ್ಕೆ ನೀರು ನುಗ್ಗಿ ಸಾಕಷ್ಟು ಹಾನಿ ಉಂಟಾಗಿದೆ ಎಂದು ಹೇಳಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…