ಕುಂದಾಪುರ:ಭಾರಿ ಮಳೆಗೆ ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಲ್ಭಾಗದಲ್ಲಿರುವ ಶೇಡಕುಳಿ ಕೆರೆ ದಂಡೆ ಕುಸಿದು ಹೋಗಿದ್ದ ಘಟನೆ ಮಂಗಳವಾರ ನಡೆದಿದೆ.
ಕೆರೆ ದಂಡೆ ಕುಸಿದು ಹೋಗಿದ್ದರ ಪರಿಣಾಮ ಕೆರೆ ಕೇಳ ಭಾಗದಲ್ಲಿರುವ ಪ್ರವೀಣ್ ಚಂದ್ರಶೆಟ್ಟಿ ಅವರ ತೋಟಕ್ಕೆ ನೀರಿನೊಂದಿಗೆ ಮಣ್ಣು ನುಗ್ಗಿ ನೂರಾರು ಅಡಿಕೆ ಗಿಡ ಸಹಿತ ಬಾಳೆ ನಾಶವಾಗಿದೆ.ಘಟನೆಯಲ್ಲಿ ಲಕ್ಷಾಂತರ.ರೂ ನಷ್ಟ ಉಂಟಾಗಿದೆ.ಮೆಕೋಡು ದೇವಸ್ಥಾನದ ಅನ್ನ ಛತ್ರದ ಒಳಗೆ ಕೆರೆ ನೀರು ನುಗ್ಗಿದ್ದರಿಂದ ಕೇಸರು ಮಯವಾಗಿದ್ದು ಕಟ್ಟಡದೊಳಗೆ ಇದ್ದ ಅಮೂಲ್ಯವಾದ ಸ್ವತ್ತುಗಳಿಗೆ ಹಾನಿ ಉಂಟಾಗಿದೆ.
ಕೃಷಿಕ ಪ್ರವೀಣ್ ಚಂದ್ರ ಶೆಟ್ಟಿ ಮಾತನಾಡಿ,ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಮೆಕೋಡು ಪುರಾತನ ಕೆರೆ ದಂಡೆ ಕುಸಿದು ಹೋಗಿದೆ.ಕೆರೆ ನೀರು ಮತ್ತು ಮಣ್ಣು ತೋಟಕ್ಕೆ ನುಗ್ಗಿದ್ದರಿಂದ ನೂರಾರು ಅಡಿಕೆ ಸಸಿಗಳು,ಬಾಳೆ ಗಿಡ ನಾಶವಾಗಿದ್ದು ಲಕ್ಷಾಂತರ ನಷ್ಟ ಉಂಟಾಗಿದೆ.ಸರಕಾರ ಪರಿಹಾರವನ್ನು ನಿಡಬೇಕು ಎಂದರು.
ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮರ್ಶಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಭಾರಿ ಮಳೆಗೆ ಕೆರೆ ದಂಡೆ ಕುಸಿತಗೊಂಡಿದ್ದು ದೇವಸ್ಥಾನದಲ್ಲಿನ ಅನ್ನ ಛತ್ರಕ್ಕೆ ನೀರು ನುಗ್ಗಿ ಸಾಕಷ್ಟು ಹಾನಿ ಉಂಟಾಗಿದೆ ಎಂದು ಹೇಳಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…