ಕುಂದಾಪುರ:ಭಾರಿ ಮಳೆಗೆ ಬೈಂದೂರು ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಮೇಲ್ಭಾಗದಲ್ಲಿರುವ ಶೇಡಕುಳಿ ಕೆರೆ ದಂಡೆ ಕುಸಿದು ಹೋಗಿದ್ದ ಘಟನೆ ಮಂಗಳವಾರ ನಡೆದಿದೆ.
ಕೆರೆ ದಂಡೆ ಕುಸಿದು ಹೋಗಿದ್ದರ ಪರಿಣಾಮ ಕೆರೆ ಕೇಳ ಭಾಗದಲ್ಲಿರುವ ಪ್ರವೀಣ್ ಚಂದ್ರಶೆಟ್ಟಿ ಅವರ ತೋಟಕ್ಕೆ ನೀರಿನೊಂದಿಗೆ ಮಣ್ಣು ನುಗ್ಗಿ ನೂರಾರು ಅಡಿಕೆ ಗಿಡ ಸಹಿತ ಬಾಳೆ ನಾಶವಾಗಿದೆ.ಘಟನೆಯಲ್ಲಿ ಲಕ್ಷಾಂತರ.ರೂ ನಷ್ಟ ಉಂಟಾಗಿದೆ.ಮೆಕೋಡು ದೇವಸ್ಥಾನದ ಅನ್ನ ಛತ್ರದ ಒಳಗೆ ಕೆರೆ ನೀರು ನುಗ್ಗಿದ್ದರಿಂದ ಕೇಸರು ಮಯವಾಗಿದ್ದು ಕಟ್ಟಡದೊಳಗೆ ಇದ್ದ ಅಮೂಲ್ಯವಾದ ಸ್ವತ್ತುಗಳಿಗೆ ಹಾನಿ ಉಂಟಾಗಿದೆ.
ಕೃಷಿಕ ಪ್ರವೀಣ್ ಚಂದ್ರ ಶೆಟ್ಟಿ ಮಾತನಾಡಿ,ಮೂರು ದಿನಗಳಿಂದ ಸುರಿದ ಭಾರಿ ಮಳೆಗೆ ಮೆಕೋಡು ಪುರಾತನ ಕೆರೆ ದಂಡೆ ಕುಸಿದು ಹೋಗಿದೆ.ಕೆರೆ ನೀರು ಮತ್ತು ಮಣ್ಣು ತೋಟಕ್ಕೆ ನುಗ್ಗಿದ್ದರಿಂದ ನೂರಾರು ಅಡಿಕೆ ಸಸಿಗಳು,ಬಾಳೆ ಗಿಡ ನಾಶವಾಗಿದ್ದು ಲಕ್ಷಾಂತರ ನಷ್ಟ ಉಂಟಾಗಿದೆ.ಸರಕಾರ ಪರಿಹಾರವನ್ನು ನಿಡಬೇಕು ಎಂದರು.
ಮೆಕೋಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮರ್ಶಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಭಾರಿ ಮಳೆಗೆ ಕೆರೆ ದಂಡೆ ಕುಸಿತಗೊಂಡಿದ್ದು ದೇವಸ್ಥಾನದಲ್ಲಿನ ಅನ್ನ ಛತ್ರಕ್ಕೆ ನೀರು ನುಗ್ಗಿ ಸಾಕಷ್ಟು ಹಾನಿ ಉಂಟಾಗಿದೆ ಎಂದು ಹೇಳಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…