ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ ನೀರು ನುಗ್ಗಿದ್ದು ಜನತೆ ಮಳೆಯಿಂದ ಹೈರಾಣಾಗಿದ್ದಾರೆ.
ಶಾಲೆಗೆ ನುಗ್ಗಿದ ಮಳೆ ನೀರು:ಶಂಕರನಾರಾಯಣ ಕುಳ್ಳುಂಜೆ ಸರಕಾರಿ ಶಾಲೆಗೆ ಭಾರಿ ಮಟ್ಟದಲ್ಲಿ ಅರಣ್ಯ ಪ್ರದೇಶದಿಂದ ಹರಿದ ಬಂದ ನೀರು ವಾರಾಹಿ ಚಾನೆಲ್ ಬೈಪಾಸ್ ಮೂಲಕ ಶಾಲಾ ಮುಂಭಾಗದಲ್ಲಿ ಹರಿದು ಬಂದ ನೀರು ನೇರವಾಗಿ ಶಾಲಾ ತರಗತಿ ಕೊಠಡಿಗಳಿಗೆ ನುಗ್ಗಿದೆ.ಅಕ್ಷರ ದಾಸೋಹ ಕಟ್ಟಡ ಬೀಳುವ ಹಂತದಲ್ಲಿದ್ದು ರಭಸದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.ಸನಿಹದಲ್ಲೆ ರಾಜ್ಯ ಹೆದ್ದಾರಿ ರಸ್ತೆಯಿದ್ದು ಶಾಲಾ ಆವರಣ ಗೋಡೆ ಕುಸಿಯುವ ಹಂತದಲ್ಲಿದೆ.ಮಕ್ಕಳ ಸುರಕ್ಷತೆ ದೃಷ್ಟಿಯಲ್ಲಿ ಈ ಬಗ್ಗೆ ಸಂಭಂದಿತರು ಗಮನಹರಿಸಬೇಕೆಂದು ಶಾಲಾ ಸಮಿತಿ ಅಧ್ಯಕ್ಷ ಗಜೇಂದ್ರ ಮಿತ್ಯಂತ ಹೇಳಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…