ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ ನೀರು ನುಗ್ಗಿದ್ದು ಜನತೆ ಮಳೆಯಿಂದ ಹೈರಾಣಾಗಿದ್ದಾರೆ.
ಶಾಲೆಗೆ ನುಗ್ಗಿದ ಮಳೆ ನೀರು:ಶಂಕರನಾರಾಯಣ ಕುಳ್ಳುಂಜೆ ಸರಕಾರಿ ಶಾಲೆಗೆ ಭಾರಿ ಮಟ್ಟದಲ್ಲಿ ಅರಣ್ಯ ಪ್ರದೇಶದಿಂದ ಹರಿದ ಬಂದ ನೀರು ವಾರಾಹಿ ಚಾನೆಲ್ ಬೈಪಾಸ್ ಮೂಲಕ ಶಾಲಾ ಮುಂಭಾಗದಲ್ಲಿ ಹರಿದು ಬಂದ ನೀರು ನೇರವಾಗಿ ಶಾಲಾ ತರಗತಿ ಕೊಠಡಿಗಳಿಗೆ ನುಗ್ಗಿದೆ.ಅಕ್ಷರ ದಾಸೋಹ ಕಟ್ಟಡ ಬೀಳುವ ಹಂತದಲ್ಲಿದ್ದು ರಭಸದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.ಸನಿಹದಲ್ಲೆ ರಾಜ್ಯ ಹೆದ್ದಾರಿ ರಸ್ತೆಯಿದ್ದು ಶಾಲಾ ಆವರಣ ಗೋಡೆ ಕುಸಿಯುವ ಹಂತದಲ್ಲಿದೆ.ಮಕ್ಕಳ ಸುರಕ್ಷತೆ ದೃಷ್ಟಿಯಲ್ಲಿ ಈ ಬಗ್ಗೆ ಸಂಭಂದಿತರು ಗಮನಹರಿಸಬೇಕೆಂದು ಶಾಲಾ ಸಮಿತಿ ಅಧ್ಯಕ್ಷ ಗಜೇಂದ್ರ ಮಿತ್ಯಂತ ಹೇಳಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…