ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ ನೀರು ನುಗ್ಗಿದ್ದು ಜನತೆ ಮಳೆಯಿಂದ ಹೈರಾಣಾಗಿದ್ದಾರೆ.
ಶಾಲೆಗೆ ನುಗ್ಗಿದ ಮಳೆ ನೀರು:ಶಂಕರನಾರಾಯಣ ಕುಳ್ಳುಂಜೆ ಸರಕಾರಿ ಶಾಲೆಗೆ ಭಾರಿ ಮಟ್ಟದಲ್ಲಿ ಅರಣ್ಯ ಪ್ರದೇಶದಿಂದ ಹರಿದ ಬಂದ ನೀರು ವಾರಾಹಿ ಚಾನೆಲ್ ಬೈಪಾಸ್ ಮೂಲಕ ಶಾಲಾ ಮುಂಭಾಗದಲ್ಲಿ ಹರಿದು ಬಂದ ನೀರು ನೇರವಾಗಿ ಶಾಲಾ ತರಗತಿ ಕೊಠಡಿಗಳಿಗೆ ನುಗ್ಗಿದೆ.ಅಕ್ಷರ ದಾಸೋಹ ಕಟ್ಟಡ ಬೀಳುವ ಹಂತದಲ್ಲಿದ್ದು ರಭಸದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.ಸನಿಹದಲ್ಲೆ ರಾಜ್ಯ ಹೆದ್ದಾರಿ ರಸ್ತೆಯಿದ್ದು ಶಾಲಾ ಆವರಣ ಗೋಡೆ ಕುಸಿಯುವ ಹಂತದಲ್ಲಿದೆ.ಮಕ್ಕಳ ಸುರಕ್ಷತೆ ದೃಷ್ಟಿಯಲ್ಲಿ ಈ ಬಗ್ಗೆ ಸಂಭಂದಿತರು ಗಮನಹರಿಸಬೇಕೆಂದು ಶಾಲಾ ಸಮಿತಿ ಅಧ್ಯಕ್ಷ ಗಜೇಂದ್ರ ಮಿತ್ಯಂತ ಹೇಳಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…