ಸಿದ್ದಾಪುರ:ಕಳೆದೆರೆಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮೀಣದ ಅಮಾಸೆಬೈಲ್ ಸಿದ್ದಾಪುರ ಹಳ್ಳಿಹೊಳೆ ಆಜ್ರಿ ಶಂಕರನಾರಾಯಣ ಅಂಪಾರು ಹೊಸಂಗಡಿ ಮುಂತಾದ ಕಡೆ ಮಳೆ ಅಬ್ಬರಕ್ಕೆ ಹಲವಾರು ವಿದ್ಯುತ್ ಕಂಬಗಳು ಬೃಹತಾಕಾರಾದ ಮರಗಳು ಧರೆಗುರುಳಿದ್ದು ಜನಸಂಚಾರಕ್ಕೆ ಅಡ್ಡಿಯಾಗಿದ್ದು ಸುತ್ತುವರಿದ ಸಂಚಾರ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.ಘಾಟ್ ಪ್ರದೇಶದಿಂದ ಬಾರಿ ಮಟ್ಟದಲ್ಲಿ ನೀರು ಹರಿದು ಬರುತ್ತಿದ್ದು ನದಿ ಹಳ್ಳ ತೋಡುಗಳು ತುಂಬಿ ಹರಿದಿದ್ದು ಗದ್ದೆಗಳಿಗೆ ನೀರು ನುಗ್ಗಿ ಜಲಾವೃತವಾಗಿದೆ ಇತ್ತಿಚೆಗೆ ಬಿತ್ತನೆ ಮಾಡಿದ ಭತ್ತ ಕೃಷಿಗಳು ಸಂಪೂರ್ಣ ಮಳೆ ಪಾಲಾಗಿವೆ.ಮನೆ ದೇವಸ್ಥಾನ ತೋಟಗಳಿಗೆ ನೀರು ನುಗ್ಗಿದ್ದು ಜನತೆ ಮಳೆಯಿಂದ ಹೈರಾಣಾಗಿದ್ದಾರೆ.
ಶಾಲೆಗೆ ನುಗ್ಗಿದ ಮಳೆ ನೀರು:ಶಂಕರನಾರಾಯಣ ಕುಳ್ಳುಂಜೆ ಸರಕಾರಿ ಶಾಲೆಗೆ ಭಾರಿ ಮಟ್ಟದಲ್ಲಿ ಅರಣ್ಯ ಪ್ರದೇಶದಿಂದ ಹರಿದ ಬಂದ ನೀರು ವಾರಾಹಿ ಚಾನೆಲ್ ಬೈಪಾಸ್ ಮೂಲಕ ಶಾಲಾ ಮುಂಭಾಗದಲ್ಲಿ ಹರಿದು ಬಂದ ನೀರು ನೇರವಾಗಿ ಶಾಲಾ ತರಗತಿ ಕೊಠಡಿಗಳಿಗೆ ನುಗ್ಗಿದೆ.ಅಕ್ಷರ ದಾಸೋಹ ಕಟ್ಟಡ ಬೀಳುವ ಹಂತದಲ್ಲಿದ್ದು ರಭಸದ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.ಸನಿಹದಲ್ಲೆ ರಾಜ್ಯ ಹೆದ್ದಾರಿ ರಸ್ತೆಯಿದ್ದು ಶಾಲಾ ಆವರಣ ಗೋಡೆ ಕುಸಿಯುವ ಹಂತದಲ್ಲಿದೆ.ಮಕ್ಕಳ ಸುರಕ್ಷತೆ ದೃಷ್ಟಿಯಲ್ಲಿ ಈ ಬಗ್ಗೆ ಸಂಭಂದಿತರು ಗಮನಹರಿಸಬೇಕೆಂದು ಶಾಲಾ ಸಮಿತಿ ಅಧ್ಯಕ್ಷ ಗಜೇಂದ್ರ ಮಿತ್ಯಂತ ಹೇಳಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…