ಕುಂದಾಪುರ;ಕಳದೆರಡು ದಿನಗಳಿಂದ ಎಡಬಿಡದೆ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ನಾವುಂದ ಸಾಲ್ಬುಡ,ಬಡಾಕೆರೆ,ಮರವಂತೆ,ಕುರು ದ್ವೀಪ,ಪಡುಕೋಣೆ ಭಾಗದಲ್ಲಿ ರಾತ್ರೋರಾತ್ರಿ ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ್ದು ಅವಾಂತರ ಸೃಷ್ಟಿ ಉಂಟು ಮಾಡಿದೆ.ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತೊಂದರೆಗೆ ಸಿಲುಕಿ ಕೊಂಡಿದ್ದಾರೆ.
ಒಂದು ವಾರದ ಹಿಂದೆ ನೆರೆ ಯಿಂದ ಸಂಕಷ್ಟವನ್ನು ಅನುಭವಿಸಿದ ನೆರೆ ಪೀಡಿತ ಪ್ರದೇಶದ ಜನರು ಮಂಗಳವಾರ ಮತ್ತೆ ಕಾಣಿಸಿಕೊಂಡಿದ್ದ ನೆರೆ ನೀರಿ ನಿಂದ ತೊಂದರೆ ಪಡುವಂತಾಯಿತು.ನಾವುಂದ ಸಾಲ್ಬುಡ ಪ್ರದೇಶಕ್ಕೆ ನೆರೆ ನೀರು ಒಮ್ಮೆ ನುಗ್ಗಿದರೆ ಸಂಪೂರ್ಣ ಇಳಿಮುಖಗೊಳ್ಳಲು ಮೂರನಾಲ್ಕು ದಿನಗಳೆ ಬೇಕಾಗುತ್ತದೆ.ನಿರಂತರವಾಗಿ ನೆರೆ ನೀರು ಮನೆ ಬಾಗಿಲನ್ನು ಆವರಿಸಿ ನಿಂತು ಕೊಳ್ಳುವುದರಿಂದ ಜನರು ಅನ್ನಹಾರ ಸಹಿತ ಕುಡಿಯುವ ನೀರಿಗೂ ಕಷ್ಟ ಪಡುವಂತಹ ಪರಿಸ್ಥಿತಿ ತಲೆ ದೊರುತ್ತದೆ.ನೆರೆ ನೀರಿ ನಿಂದ ಸಂಕಷ್ಟವನ್ನು ಅನುಭವಿಸುವ ಸಂತೃಸ್ಥರಿಗೆ ಕನಿಷ್ಠ ಪಕ್ಷ ಆಹಾರ ಸಾಮಾಗ್ರಿಗಳ ಕಿಟ್,ಶುದ್ಧ ಕುಡಿಯುವ ನೀರಿನ ಅನುಕೂಲವನ್ನು ಮಾಡಿ ಕೊಡಲು ಆಡಳಿತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.ನೆರೆ ಪೀಡಿತ ಜನರ ಗೋಳನ್ನು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಜನರು ದೂರಿದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…