ಕುಂದಾಪುರ;ಕಳದೆರಡು ದಿನಗಳಿಂದ ಎಡಬಿಡದೆ ಸುರಿದ ಭಾರಿ ಮಳೆಗೆ ಸೌಪರ್ಣಿಕಾ ನದಿ ಉಕ್ಕಿ ಹರಿದ ಪರಿಣಾಮ ನಾವುಂದ ಸಾಲ್ಬುಡ,ಬಡಾಕೆರೆ,ಮರವಂತೆ,ಕುರು ದ್ವೀಪ,ಪಡುಕೋಣೆ ಭಾಗದಲ್ಲಿ ರಾತ್ರೋರಾತ್ರಿ ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ್ದು ಅವಾಂತರ ಸೃಷ್ಟಿ ಉಂಟು ಮಾಡಿದೆ.ನೆರೆ ನೀರು ಮನೆ ಬಾಗಿಲಿಗೆ ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತೊಂದರೆಗೆ ಸಿಲುಕಿ ಕೊಂಡಿದ್ದಾರೆ.
ಒಂದು ವಾರದ ಹಿಂದೆ ನೆರೆ ಯಿಂದ ಸಂಕಷ್ಟವನ್ನು ಅನುಭವಿಸಿದ ನೆರೆ ಪೀಡಿತ ಪ್ರದೇಶದ ಜನರು ಮಂಗಳವಾರ ಮತ್ತೆ ಕಾಣಿಸಿಕೊಂಡಿದ್ದ ನೆರೆ ನೀರಿ ನಿಂದ ತೊಂದರೆ ಪಡುವಂತಾಯಿತು.ನಾವುಂದ ಸಾಲ್ಬುಡ ಪ್ರದೇಶಕ್ಕೆ ನೆರೆ ನೀರು ಒಮ್ಮೆ ನುಗ್ಗಿದರೆ ಸಂಪೂರ್ಣ ಇಳಿಮುಖಗೊಳ್ಳಲು ಮೂರನಾಲ್ಕು ದಿನಗಳೆ ಬೇಕಾಗುತ್ತದೆ.ನಿರಂತರವಾಗಿ ನೆರೆ ನೀರು ಮನೆ ಬಾಗಿಲನ್ನು ಆವರಿಸಿ ನಿಂತು ಕೊಳ್ಳುವುದರಿಂದ ಜನರು ಅನ್ನಹಾರ ಸಹಿತ ಕುಡಿಯುವ ನೀರಿಗೂ ಕಷ್ಟ ಪಡುವಂತಹ ಪರಿಸ್ಥಿತಿ ತಲೆ ದೊರುತ್ತದೆ.ನೆರೆ ನೀರಿ ನಿಂದ ಸಂಕಷ್ಟವನ್ನು ಅನುಭವಿಸುವ ಸಂತೃಸ್ಥರಿಗೆ ಕನಿಷ್ಠ ಪಕ್ಷ ಆಹಾರ ಸಾಮಾಗ್ರಿಗಳ ಕಿಟ್,ಶುದ್ಧ ಕುಡಿಯುವ ನೀರಿನ ಅನುಕೂಲವನ್ನು ಮಾಡಿ ಕೊಡಲು ಆಡಳಿತ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.ನೆರೆ ಪೀಡಿತ ಜನರ ಗೋಳನ್ನು ಕೇಳುವವರು ಯಾರು ಇಲ್ಲದಂತಾಗಿದೆ ಎಂದು ಜನರು ದೂರಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…