ಬೈಂದೂರು:ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಇಂಗ್ಲೀಷ್ ಮತ್ತು ಕನ್ನಡ ದ್ವಿಭಾಷಾ ಮಾಧ್ಯಮ ಒಂದನೇ ತರಗತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ದೀಪ ಬೆಳಗಿಸಿ ಚಾಲನೆ ನೀಡಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ರಾಧಾ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.
ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಡಾ.ಸುಬ್ರಹ್ಮಣ್ಯ ಭಟ್ ಅವರು ಕೊಡುಗೆಯಾಗಿ ನೀಡಿದ ಇಂಗ್ಲೀಷ್ ಪುಸ್ತಕಗಳನ್ನು ಒಂದನೇ ತರಗತಿ ಹಾಗೂ ಎಲ್ ಕೆ ಜಿ,ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ದೇವಾಡಿಗ ಮತ್ತು ಶಾರದಾ ದೇವಾಡಿಗ ವಿತರಿಸಿ ಶುಭ ಹಾರೈಸಿದರು.
ದಿ, ಶೇಷಗಿರಿ ಹೆಬ್ಬಾರ್ ನೆನಪಿನಾರ್ಥ ಅವರ ಮಗನಾದ ಗುರುರಾಜ ಹೆಬ್ಬಾರ್ ಕೊಡುಗೆಯಾಗಿ ನೀಡಿದ ಸಮವಸ್ತ್ರ ಮತ್ತು ಬೆಲ್ಟ್ ಜೆ ಸಿ ಐ ಉಪ್ಪುಂದ ಅಧ್ಯಕ್ಷ ಮಂಜುನಾಥ್ ದೇವಾಡಿಗ ಮಕ್ಕಳಿಗೆ ವಿತರಿಸಿದರು.
ಇದೇ ಸಂದರ್ಭ ಉದ್ಯಮಿ ನಾಗರಾಜ್ ಪೂಜಾರಿ, ಕೊಡೇರಿ ಅವರು ನೀಡಿದ ಕ್ರೀಡಾ ಸಾಮಗ್ರಿಗಳನ್ನು ಅವರ ಪತ್ನಿ ರಾಧಾ ಪೂಜಾರಿ ಶಾಲೆಗೆ ಹಸ್ತಾಂತರಿಸಿದರು.
ಗ್ಕುಮಾರ ದೇವಾಡಿಗ ಹಾಗೂ ರಾಮ ಬಾಳೆಬೆಟ್ಟು ಉಪಸ್ಥಿತರಿದ್ದರು.ಎಸ್ ಡಿ ಎಂ ಸಿ ಯ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಮಹಾಬಲ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಶತಮಾನ ಪೂರೈಸಿದ ಈ ಶಾಲೆಗೆ ಹಳೆ ವಿದ್ಯಾರ್ಥಿಗಳು, ದಾನಿಗಳ ಸಹಕಾರ ಅತಿ ಅಗತ್ಯವಾಗಿದೆ.ತೀರ ಹಳೆಯದಾದ ಕಟ್ಟಡಗಳಿಗೆ ಕಾಯಕಲ್ಪ ನೀಡಬೇಕಾಗಿದೆ. ಆದುದರಿಂದ ಶಾಲಾ ಭಾಗಿದಾರರು ತಮ್ಮ ಕೈಲಾದ ಸಹಾಯ, ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.ಶಿಕ್ಷಕರಾದ ನಾಗ ದೇವಾಡಿಗ ಸ್ವಾಗತಿಸಿದರು.ಶಿಕ್ಷಕಿಯರಾದ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿ,ನಾಗರತ್ನ.ಬಿ ವಂದಿಸಿದರು .ಶಿಕ್ಷಕಿಯರಾದ ಸರಸ್ವತಿ ಪಿ,ಅಕ್ಷತಾ ಎಮ್ ಶೆಟ್ಟಿ ಗೌರವ ಶಿಕ್ಷಕಿಯರಾದ ಪಲ್ಲವಿ, ಆಶಿಕಾ ಹಾಗೂ ಸುಶ್ಮಿತಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…