ಕುಂದಾಪುರ

ಕಂಬದಕೋಣೆ ಶಾಲೆ: ಇಂಗ್ಲೀಷ್,ಕನ್ನಡ ದ್ವಿಭಾಷಾ ಮಾಧ್ಯಮ ಆರಂಭ,ವಿವಿಧ ಕೊಡುಗೆ ಕಾರ್ಯಕ್ರಮ

Share

ಬೈಂದೂರು:ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಬದಕೋಣೆಯಲ್ಲಿ ಇಂಗ್ಲೀಷ್ ಮತ್ತು ಕನ್ನಡ ದ್ವಿಭಾಷಾ ಮಾಧ್ಯಮ ಒಂದನೇ ತರಗತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ದೀಪ ಬೆಳಗಿಸಿ ಚಾಲನೆ ನೀಡಿದರು.
ಎಸ್ ಡಿ ಎಂ ಸಿ ಅಧ್ಯಕ್ಷೆ ರಾಧಾ ಪೂಜಾರಿ ಸಭಾಧ್ಯಕ್ಷತೆ ವಹಿಸಿದ್ದರು.
ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ನಿರ್ದೇಶಕರಾದ ಡಾ.ಸುಬ್ರಹ್ಮಣ್ಯ ಭಟ್ ಅವರು ಕೊಡುಗೆಯಾಗಿ ನೀಡಿದ ಇಂಗ್ಲೀಷ್ ಪುಸ್ತಕಗಳನ್ನು ಒಂದನೇ ತರಗತಿ ಹಾಗೂ ಎಲ್ ಕೆ ಜಿ,ಯುಕೆಜಿ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ದೇವಾಡಿಗ ಮತ್ತು ಶಾರದಾ ದೇವಾಡಿಗ ವಿತರಿಸಿ ಶುಭ ಹಾರೈಸಿದರು.
ದಿ, ಶೇಷಗಿರಿ ಹೆಬ್ಬಾರ್ ನೆನಪಿನಾರ್ಥ ಅವರ ಮಗನಾದ ಗುರುರಾಜ ಹೆಬ್ಬಾರ್ ಕೊಡುಗೆಯಾಗಿ ನೀಡಿದ ಸಮವಸ್ತ್ರ ಮತ್ತು ಬೆಲ್ಟ್ ಜೆ ಸಿ ಐ ಉಪ್ಪುಂದ ಅಧ್ಯಕ್ಷ ಮಂಜುನಾಥ್ ದೇವಾಡಿಗ ಮಕ್ಕಳಿಗೆ ವಿತರಿಸಿದರು.
ಇದೇ ಸಂದರ್ಭ ಉದ್ಯಮಿ ನಾಗರಾಜ್ ಪೂಜಾರಿ, ಕೊಡೇರಿ ಅವರು ನೀಡಿದ ಕ್ರೀಡಾ ಸಾಮಗ್ರಿಗಳನ್ನು ಅವರ ಪತ್ನಿ ರಾಧಾ ಪೂಜಾರಿ ಶಾಲೆಗೆ ಹಸ್ತಾಂತರಿಸಿದರು.
ಗ್ಕುಮಾರ ದೇವಾಡಿಗ ಹಾಗೂ ರಾಮ ಬಾಳೆಬೆಟ್ಟು ಉಪಸ್ಥಿತರಿದ್ದರು.ಎಸ್ ಡಿ ಎಂ ಸಿ ಯ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಶಾಲಾ ಮುಖ್ಯೋಪಾಧ್ಯಾಯರಾದ ಮಹಾಬಲ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಶತಮಾನ ಪೂರೈಸಿದ ಈ ಶಾಲೆಗೆ ಹಳೆ ವಿದ್ಯಾರ್ಥಿಗಳು, ದಾನಿಗಳ ಸಹಕಾರ ಅತಿ ಅಗತ್ಯವಾಗಿದೆ.ತೀರ ಹಳೆಯದಾದ ಕಟ್ಟಡಗಳಿಗೆ ಕಾಯಕಲ್ಪ ನೀಡಬೇಕಾಗಿದೆ. ಆದುದರಿಂದ ಶಾಲಾ ಭಾಗಿದಾರರು ತಮ್ಮ ಕೈಲಾದ ಸಹಾಯ, ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು.ಶಿಕ್ಷಕರಾದ ನಾಗ ದೇವಾಡಿಗ ಸ್ವಾಗತಿಸಿದರು.ಶಿಕ್ಷಕಿಯರಾದ ಪದ್ಮಾವತಿ ಕಾರ್ಯಕ್ರಮ ನಿರೂಪಿಸಿ,ನಾಗರತ್ನ.ಬಿ ವಂದಿಸಿದರು .ಶಿಕ್ಷಕಿಯರಾದ ಸರಸ್ವತಿ ಪಿ,ಅಕ್ಷತಾ ಎಮ್ ಶೆಟ್ಟಿ ಗೌರವ ಶಿಕ್ಷಕಿಯರಾದ ಪಲ್ಲವಿ, ಆಶಿಕಾ ಹಾಗೂ ಸುಶ್ಮಿತಾ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago