ಕುಂದಾಪುರ

ಸೋಮೇಶ್ವರ ಬಳಿ ಗುಡ್ಡ ಕುಸಿತ ಭೀತಿ:ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

Share

Advertisement
Advertisement
Advertisement

ಕುಂದಾಪುರ:ಬೈಂದೂರು ಪಡುವರಿ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು,ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.‌ ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು.ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಸೂಚಿಸಿದ್ದಾರೆ.
ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಥಳೀಯರು ಎಚ್ಚರಿಕೆ ಸೂಚನೆ ನೀಡಿರುವ ಜತೆಗೆ ದೂರನ್ನು ಕೊಟ್ಟಿದ್ದರು.ಈ ಬಗ್ಗೆ ಗಂಭೀರವಾಗಿ ಯೋಚಿಸಿ ಕ್ರಮಕ್ಕೆ ಸೂಚನೆಯನ್ನು ನೀಡಲಾಗಿತ್ತು.ಆದರೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಹೀಗಾಗುತ್ತಿದೆ.
ಗುಡ್ಡ ಜರಿದು ರಸ್ತೆ ಬ್ಲಾಕ್ ಆಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ಈ ಹಿಂದೆಯೇ ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ.ಹೀಗಾಗಿ ಕಾಮಗಾರಿಗೆ ಸಂಬಂಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಆಗಬೇಕು ಎಂದು ಶಾಸಕರು ಎಚ್ಚರಿಸಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು ಹಲವೆಡೆ ಮಳೆ ಹಾನಿ ಸಂಭವಿಸಿದೆ.ರಾಷ್ಟ್ರೀಯ ಹೆದ್ದಾರಿ ಸಾಗುವ ಒತ್ತಿನೆಣೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.ದೊಂಬೆ ರಸ್ತೆಯನ್ನು ಅಧಿಕಾರಿಗಳು ಈ ಬಗೆಯಲ್ಲಿ ನಿರ್ಲಕ್ಷ್ಯ ಮಾಡಿವುದು ಯಾಕೆ ಎಂದು ಶಾಸಕರು ಪ್ರಶ್ನಿಸಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

4 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

7 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

1 week ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

1 week ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago