ಮಂಗಳೂರು:ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.
ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.
ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.
ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸು ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…