ಮಂಗಳೂರು:ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.
ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.
ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.
ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸು ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…