ಬೈಂದೂರು:ಮಳೆ,ನೆರೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಬೇಕಾಗುತ್ತದೆ. ಇಲ್ಲವಾದರೆ ಗೊಂದಲ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.
ಬೈಂದೂರು ಮತ್ತು ಕುಂದಾಪುರ ಅವಳಿ ತಾಲೂಕುಗಳಿದ್ದಂತೆ ಇಡೀ ತಾಲೂಕಿಗೆ ರಜೆ ನೀಡುವ ಸಂದರ್ಭದಲ್ಲಿ ಎರಡು ಕಡೆ ಅನ್ವಯಿಸುವಂತೆ ಮಾಡಬೇಕು. ಬೈಂದೂರು ಭಾಗದ ಅನೇಕ ವಿದ್ಯಾರ್ಥಿಗಳು,ಶಿಕ್ಷಕರು ಕುಂದಾಪುರ ಭಾಗಕ್ಕೆ ಹೋಗುತ್ತಾರೆ, ಕುಂದಾಪುರದಿಂದ ಈ ಭಾಗಕ್ಕೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆದರೆ ಶಿಕ್ಷಕರು, ಉಪನ್ಯಾಸಕರು ಹೆಚ್ಚಿದ್ದಾರೆ. ಹೀಗಾಗಿ ಬೈಂದೂರಿಗೆ ರಜೆ ನೀಡಿದಾಗ ಕುಂದಾಪುರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತದೆ.ಆದ್ದರಿಂದ ಈ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಿಕೊಂಡು ತಾಹಶೀಲ್ದಾರರು,ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡೇ ರಜೆ ನೀಡುವಂತಾಗಬೇಕು. ಇಲ್ಲವಾದರೆ ಅನವಶ್ಯಕ ಗೊಂದಲ ಸೃಷ್ಟಿಯಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು ಎಂಬ ಸಲಹೆಯನ್ನು ಅಧಿಕಾರಿಗಳಿಗೆ ಶಾಸಕರು ನೀಡಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…