ಕುಂದಾಪುರ:ಇಂದು ಅಭಿವೃದ್ಧಿ ಹೆಸರಿನಲ್ಲಿ ನಮ್ಮ ದೇಶದ ಬಹುಪಾಲು ಅರಣ್ಯವನ್ನು ಕಡಿಯಲಾಗಿದ್ದು ಹಾಗಾಗಿ ಹವಾಮಾನದಲ್ಲಿ ಸಾಕಷ್ಟು ವೈಪರೀತ್ಯ ಕಾಣುತ್ತಿದ್ದೇವೆ. ನಮ್ಮ ಬದುಕು ಸಂತಸದಾಯಿಕವಾಗಿ ಸಾಗಬೇಕಾದರೆ ಹಸಿರು ಗಿಡಮರಗಳು ಅತ್ಯಗತ್ಯ.ಪ್ರತೀ ವರ್ಷ ವನಮಹೋತ್ಸವ ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರವು ಹೆಚ್ಚುಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಸರ್ಕಾರದ ಆಲೋಚನೆಯಲ್ಲಿ ಲಯನ್ ಕ್ಲಬ್ ಮೊದಲಾದ ಸಂಸ್ಥೆಗಳು ಕೈಜೋಡಿಸುತ್ತಿವೆ.ಪ್ರತೀ ವರ್ಷ ಶಾಲೆಗಳಲ್ಲಿ ನಡೆಸುತ್ತಿರುವ ವನಮಹೋತ್ಸವ ಕಾರ್ಯಕ್ರಮಗಳು ಶ್ಲಾಘನೀಯ.ಹಸಿರು ಪರಿಸರ ಕಾಪಾಡುವುದು ನಮ್ಮೆಲ್ಲರ ಹೊಣೆ ಎಂದು ಲಯನ್ಸ್ ಕ್ಲಬ್ ಉಡುಪಿ ಜಿಲ್ಲಾ ರಾಯಬಾರಿ ಆಗಿರುವ ಲಯನ್ಸ್ ಕ್ಲಬ್ ಉಡುಪಿ ಜಿಲ್ಲೆಯ ಗವರ್ನರ್ ಆಗಿರುವ ಲಯನ್ ಬಿ.ಅರುಣ್ ಕುಮಾರ್ ಹೆಗ್ಡೆ ಹೇಳಿದರು.
ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ ಮತ್ತು ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ ಲಿಟ್ಲ್ ಸ್ಟಾರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜೊತೆಯಾಗಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅರಣ್ಯ ಅಧಿಕಾರಿ ಮಂಜುನಾಥ ಗಣಪತಿ ನಾಯಕ್ ಮಾತನಾಡುತ್ತ,1950ರಲ್ಲಿ ಅಂದಿನ ಕೇಂದ್ರ ಸಚಿವರಾಗಿದ್ದ ಕೆ.ಎನ್. ಮುನ್ಷಿ ಅವರಿಂದ ಆರಂಭವಾದ ವನಮಹೋತ್ಸವ ಕಾರ್ಯಕ್ರಮ ಇಂದು ಹಸಿರು ಪರಿಸರ ನಿರ್ಮಾಣದಲ್ಲಿ ತುಂಬಾ ಸಹಕಾರಿಯಾಗಿದೆ ಎಂದರು.
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಅವರು ಮಾತನಾಡುತ್ತಾ ವನಮಹೋತ್ಸವದಂತಹ ಹಲವಾರು ಅರಿವು ಮತ್ತು ಜಾಗ್ರತಿ ಮೂಡಿಸುವ ಕಾರ್ಯಕ್ರಮವನ್ನು ನಮ್ಮ ಸಂಸ್ಥೆ ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದ್ದು ಮುಂದಿನ ದಿನಗಳಲ್ಲಿಯೂ ಸಾಗಲಿದೆ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಮೊಳಹಳ್ಳಿ ಶಿವಶಾಂತಿ ಯ ಅಧ್ಯಕ್ಷರಾದ ಲಯನ್ ಯು.ಎಸ್.ಮೋಹನ್ ದಾಸ್ ಶೆಟ್ಟಿ ಮಾತನಾಡುತ್ತ ಇಂದು ವಿಶ್ವದಾದ್ಯಂತ ಲಯನ್ಸ್ ಹಲವಾರು ಜನುಪಯೋಗಿ ಕಾರ್ಯಕ್ರಮಗಳನ್ನು ನಡೆಸಿ ಒಂದು ಮಾದರಿ ಸಂಸ್ಥೆಯಾಗಿ ಸೇವೆ ಸಲ್ಲಿಸುತ್ತಿದೆ ಎಂದರು.
ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರಾದ ಸುಬ್ಬಣ್ಣ ಶೆಟ್ಟಿ,ಲಯನ್ಸ್ ಕ್ಲಬ್ ಕಾರ್ಯದರ್ಶಿ ಯಾದ ಉದಯ ಕುಮಾರ್ ಶೆಟ್ಟಿ, ಖಜಾಂಚಿ ದಯಾನಂದ, ಸಂಸ್ಥೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಪ್ರತಾಪ್ ಚಂದ್ರ ಶೆಟ್ಟಿ,ಭರತ್ ಶೆಟ್ಟಿ ಹಾಗೂ ಮುಖ್ಯ ಶಿಕ್ಷಕರಾದ ಪ್ರದೀಪ್ ಉಪಸ್ಥಿತರಿದ್ದರು. ಶಿಕ್ಷಕ ಸಂತೋಷ್ ಕುಮಾರ್ ನಿರೂಪಿಸಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…