ಕುಂದಾಪುರ

ಮಳೆಹಾನಿಗೆ ತುರ್ತು ಪರಿಹಾರ ಒದಗಿಸಲು ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ

Share

ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು
ನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ ಹಾಳಾಗಿದೆ. ಇನ್ನು ಕೆಲವು ಭಾಗದಲ್ಲಿ ಕಡಲ್ಕೊರೆತದಿಂದ ತೆಂಗಿನ ಮರಗಳು ಸಹಿತ ಆಸ್ತಿಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ. ಇದೆಲ್ಲದಕ್ಕೂ ಶೀಘ್ರವೇ ಪರಿಹಾರ ಒದಗಿಸುವ ಕಾರ್ಯ ಆಗಬೇಕು ಎಂದರು.
ಮಳೆಯಿಂದ ಅಪಾರ ಪ್ರಮಾಣದಲ್ಲಿ ಭತ್ತದ ಗದ್ದೆಗಳಿಗೆ ಹಾನಿಯಾಗಿವೆ. ಬೆಳೆ ಹಾನಿಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಪರಿಹಾರ ಒದಿಸುವ ಕಾರ್ಯ ಆಗಬೇಕು. ತೋಟಗಾರಿಕೆ ಬೆಳೆಗಳಿಗೂ ಹಾನಿಯಾಗಿದೆ. ಎಷ್ಟು ಭಾಗದಲ್ಲಿ ಹಾನಿಯಾಗಿದೆ ಎಂಬುದನ್ನು ಗುರುತಿಸಿ, ಆದಷ್ಟು ಬೇಗ ರೈತರಿಗೆ, ಬೆಳೆಗಾರರಿಗೆ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.
ಪರಿಹಾರ ವಿಳಂಬ
ಮಳೆಹಾನಿ ಸಹಿತ ಪ್ರಕೃತಿ ವಿಕೋಪದಿಂದ ಆಗುತ್ತಿರುವ ಹಾನಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಬರಲು ವಿಳಂಬ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಿಂದ ಮನೆಗಳು ಸಂಪೂರ್ಣ ಹಾನಿಯಾದಾಗ 5 ಲಕ್ಷಗಳ ವರೆಗೂ ಪರಿಹಾರ ನೀಡಲಾಗುತಿತ್ತು. ಅದನ್ನು ಈಗ 1.20ಲಕ್ಷಕ್ಕೆ ಸಮೀತಗೊಳಿಸಿದ್ದಾರೆ. ಪರಿಹಾರ ನೀಡುವಾಗ ನಾನಾ ತಾಂತ್ರಿಕ ಸಮಸ್ಯೆ ಹಾಗೂ ಕುಂಟು ನೆಪವೊಡ್ಡುವುದನ್ನು ನಿಲ್ಲಿಸಬೇಕು. ಹಾನಿಗೊಳಗಾದವರ ಸಂಕಷ್ಟ ಅರಿತು ಕೂಡಲೇ ಹೆಚ್ಚಿನ ಪರಿಹಾರ ನೀಡಬೇಕು ಎಂದು ನಿರ್ದೇಶಿಸಿದರು.
ಎಲ್ಲ ರೀತಿಯಲ್ಲೂ ಸನ್ನದ್ಧರಾಗಿರಬೇಕು
ಮಳೆಗಾಲದಲ್ಲಿ ಸಾರ್ವಜನಿಕರಿಂದ ಹಲವು ದೂರುಗಳು ಬರುತ್ತಿರುತ್ತದೆ. ಎಲ್ಲ ದೂರುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕು ಮತ್ತು ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಬೇಕು. ಅವರ ಸಮಸ್ಯೆಗಳಿಗೆ ಧ್ವನಿಯಾಗಬೇಕೇ ವಿನಃ ಅವರೊಂದಿಗೆ ದರ್ಪದಿಂದ ವರ್ತಿಸಬಾರದು. ಹೀಗಾಗಿ ಇಡೀ ತಾಲೂಕು ತಂಡ ಮಳೆಗಾಲದ ಸೇವೆ ಸಜ್ಜಾಗಿರಬೇಕು. ಅಲ್ಲದೆ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಶಾಲಾ ಕಟ್ಟಡಗಳಿಗೆ ಹೆಚ್ಚು ಹಾನಿ
ಕ್ಷೇತ್ರದ ಶಾಲಾ ಕಟ್ಟಡಗಳಿಗೆ ಮಳೆಯಿಂದ ಹೆಚ್ಚಿನ ಹಾನಿಯಾಗಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ ಪ್ರತಿ ಶಾಲೆಯಿಂದ ವರದಿ ಪಡೆಯಬೇಕು ಅಲ್ಲದೆ ಅಗತ್ಯವಿರುವ ಕಡೆಗಳಲ್ಲಿ ತುರ್ತು ಕಟ್ಟಡದ ವ್ಯವಸ್ಥೆ ಅಥವಾ ಬದಲಿ ಕಟ್ಟಡದ ವ್ಯವಸ್ಥೆ ಮಾಡಬೇಕು ಶೈಕ್ಷಣಿಕ ವಿಚಾರದಲ್ಲಿ ಯಾವುದೇ ವಿಳಂಬ ಧೋರಣೆ ಸರಿಯಲ್ಲ ಎಂಬ ನಿರ್ದೇಶನ ನೀಡಿದರು.
ತುರ್ತು ವ್ಯವಸ್ಥೆ ಅಗತ್ಯ
ಬೈಂದೂರು-ದೊಂಬೆ ಮಾರ್ಗದಲ್ಲಿ ಸೋಮೇಶ್ವರ ಸಮೀಪ ಗುಡ್ಡ ಕುಸಿದಿದ್ದು ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ ಎದ್ದು ತೋರುತ್ತದೆ. ಈ ಪರಿಸರದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಅತೀ ಶೀಘ್ರದಲ್ಲೇ ಓಡಾಟದ ರಸ್ತೆ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.
ತಹಶಿಲ್ದಾರ್ ಪ್ರದೀಪ್,ಇಓ ಭಾರತಿ, ಬಿಇಒ ನಾಗೇಶ್, ಆರ್ ಎಫ್ ಓ ಸಂದೇಶ್, ಎಸ್.ಐ, ತಿಮ್ಮೇಶ್, ಪಟ್ಟಣ ಪಂಚಾಯತಿ ಸಿಒ ಅಜಯ್ ಭಾಸ್ಕರ್ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago