ಕುಂದಾಪುರ

ಮಳೆಹಾನಿಗೆ ತುರ್ತು ಪರಿಹಾರ ಒದಗಿಸಲು ಶಾಸಕರಾದ ಗುರುರಾಜ್ ಗಂಟಿಹೊಳೆ ನಿರ್ದೇಶನ

Share

ಕುಂದಾಪುರ:ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಳಿಮಳೆ, ಕಡಲ್ಕೊರೆತ ಮತ್ತು ನೆರೆಯಿಂದ ಆಗಿರುವ ಹಾನಿಗಳಿಗೆ ಶೀಘ್ರವೇ ಪರಿಹಾರ ಒದಗಿಸಬೇಕು ಮತ್ತು ಅಗತ್ಯ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ಅವರು
ನಿರಂತರ ಮಳೆಯಿಂದ ನೆರೆ, ಪ್ರವಾಹದಿಂದ ಅನೇಕರ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿವೆ. ಕೆಲವು ಕಡೆಗಳಲ್ಲಿ ರಸ್ತೆ ಹಾಳಾಗಿದೆ. ಇನ್ನು ಕೆಲವು ಭಾಗದಲ್ಲಿ ಕಡಲ್ಕೊರೆತದಿಂದ ತೆಂಗಿನ ಮರಗಳು ಸಹಿತ ಆಸ್ತಿಪಾಸ್ತಿಗೆ ಅಪಾರ ಹಾನಿ ಉಂಟಾಗಿದೆ. ಇದೆಲ್ಲದಕ್ಕೂ ಶೀಘ್ರವೇ ಪರಿಹಾರ ಒದಗಿಸುವ ಕಾರ್ಯ ಆಗಬೇಕು ಎಂದರು.
ಮಳೆಯಿಂದ ಅಪಾರ ಪ್ರಮಾಣದಲ್ಲಿ ಭತ್ತದ ಗದ್ದೆಗಳಿಗೆ ಹಾನಿಯಾಗಿವೆ. ಬೆಳೆ ಹಾನಿಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಪರಿಹಾರ ಒದಿಸುವ ಕಾರ್ಯ ಆಗಬೇಕು. ತೋಟಗಾರಿಕೆ ಬೆಳೆಗಳಿಗೂ ಹಾನಿಯಾಗಿದೆ. ಎಷ್ಟು ಭಾಗದಲ್ಲಿ ಹಾನಿಯಾಗಿದೆ ಎಂಬುದನ್ನು ಗುರುತಿಸಿ, ಆದಷ್ಟು ಬೇಗ ರೈತರಿಗೆ, ಬೆಳೆಗಾರರಿಗೆ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.
ಪರಿಹಾರ ವಿಳಂಬ
ಮಳೆಹಾನಿ ಸಹಿತ ಪ್ರಕೃತಿ ವಿಕೋಪದಿಂದ ಆಗುತ್ತಿರುವ ಹಾನಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಬರಲು ವಿಳಂಬ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರಕೃತಿ ವಿಕೋಪದಿಂದ ಮನೆಗಳು ಸಂಪೂರ್ಣ ಹಾನಿಯಾದಾಗ 5 ಲಕ್ಷಗಳ ವರೆಗೂ ಪರಿಹಾರ ನೀಡಲಾಗುತಿತ್ತು. ಅದನ್ನು ಈಗ 1.20ಲಕ್ಷಕ್ಕೆ ಸಮೀತಗೊಳಿಸಿದ್ದಾರೆ. ಪರಿಹಾರ ನೀಡುವಾಗ ನಾನಾ ತಾಂತ್ರಿಕ ಸಮಸ್ಯೆ ಹಾಗೂ ಕುಂಟು ನೆಪವೊಡ್ಡುವುದನ್ನು ನಿಲ್ಲಿಸಬೇಕು. ಹಾನಿಗೊಳಗಾದವರ ಸಂಕಷ್ಟ ಅರಿತು ಕೂಡಲೇ ಹೆಚ್ಚಿನ ಪರಿಹಾರ ನೀಡಬೇಕು ಎಂದು ನಿರ್ದೇಶಿಸಿದರು.
ಎಲ್ಲ ರೀತಿಯಲ್ಲೂ ಸನ್ನದ್ಧರಾಗಿರಬೇಕು
ಮಳೆಗಾಲದಲ್ಲಿ ಸಾರ್ವಜನಿಕರಿಂದ ಹಲವು ದೂರುಗಳು ಬರುತ್ತಿರುತ್ತದೆ. ಎಲ್ಲ ದೂರುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕು ಮತ್ತು ಸಾರ್ವಜನಿಕರೊಂದಿಗೆ ಸಹನೆಯಿಂದ ವರ್ತಿಸಬೇಕು. ಅವರ ಸಮಸ್ಯೆಗಳಿಗೆ ಧ್ವನಿಯಾಗಬೇಕೇ ವಿನಃ ಅವರೊಂದಿಗೆ ದರ್ಪದಿಂದ ವರ್ತಿಸಬಾರದು. ಹೀಗಾಗಿ ಇಡೀ ತಾಲೂಕು ತಂಡ ಮಳೆಗಾಲದ ಸೇವೆ ಸಜ್ಜಾಗಿರಬೇಕು. ಅಲ್ಲದೆ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಶಾಲಾ ಕಟ್ಟಡಗಳಿಗೆ ಹೆಚ್ಚು ಹಾನಿ
ಕ್ಷೇತ್ರದ ಶಾಲಾ ಕಟ್ಟಡಗಳಿಗೆ ಮಳೆಯಿಂದ ಹೆಚ್ಚಿನ ಹಾನಿಯಾಗಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ ಪ್ರತಿ ಶಾಲೆಯಿಂದ ವರದಿ ಪಡೆಯಬೇಕು ಅಲ್ಲದೆ ಅಗತ್ಯವಿರುವ ಕಡೆಗಳಲ್ಲಿ ತುರ್ತು ಕಟ್ಟಡದ ವ್ಯವಸ್ಥೆ ಅಥವಾ ಬದಲಿ ಕಟ್ಟಡದ ವ್ಯವಸ್ಥೆ ಮಾಡಬೇಕು ಶೈಕ್ಷಣಿಕ ವಿಚಾರದಲ್ಲಿ ಯಾವುದೇ ವಿಳಂಬ ಧೋರಣೆ ಸರಿಯಲ್ಲ ಎಂಬ ನಿರ್ದೇಶನ ನೀಡಿದರು.
ತುರ್ತು ವ್ಯವಸ್ಥೆ ಅಗತ್ಯ
ಬೈಂದೂರು-ದೊಂಬೆ ಮಾರ್ಗದಲ್ಲಿ ಸೋಮೇಶ್ವರ ಸಮೀಪ ಗುಡ್ಡ ಕುಸಿದಿದ್ದು ಇದರಲ್ಲಿ ಅಧಿಕಾರಿಗಳ ನಿರ್ಲಕ್ಷ ಎದ್ದು ತೋರುತ್ತದೆ. ಈ ಪರಿಸರದ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಅತೀ ಶೀಘ್ರದಲ್ಲೇ ಓಡಾಟದ ರಸ್ತೆ ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸೂಚಿಸಿದರು.
ತಹಶಿಲ್ದಾರ್ ಪ್ರದೀಪ್,ಇಓ ಭಾರತಿ, ಬಿಇಒ ನಾಗೇಶ್, ಆರ್ ಎಫ್ ಓ ಸಂದೇಶ್, ಎಸ್.ಐ, ತಿಮ್ಮೇಶ್, ಪಟ್ಟಣ ಪಂಚಾಯತಿ ಸಿಒ ಅಜಯ್ ಭಾಸ್ಕರ್ ಸಹಿತ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago