ಕುಂದಾಪುರ

ಜನತಾ ನವನೀತ-2024 ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟನೆ

Share

ಕುಂದಾಪುರ:ಮಕ್ಕಳ ಒಳಗೆ ಅಡಗಿರುವ ಆತಂತರಿಕ ತುಡಿತವನ್ನು ಹುಡುಕಿ ಅವರ ಅಭಿರುಚಿಗೆ ತಕ್ಕಂತೆ ಶಿಕ್ಷಣವನ್ನು ನೀಡುವುದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗುತ್ತದೆ.ಆ ನಿಟ್ಟಿನಲ್ಲಿ ಹೆಮ್ಮಾಡಿ ಜನತಾ ಕಾಲೇಜು ಮುಂದುಡಿ ಇಡುತ್ತಿದ್ದು ಹೆಚ್ಚಿನ ರ್ಯಾಂಕ್‍ಗಳನ್ನು ಗಳಿಸಲು ಸಾಧ್ಯವಾಗಿದೆ.ಕಾಲೇಜು ಆರಂಭಗೊಂಡ ಕೇವಲ ಎರಡೆ ವರ್ಷದಲ್ಲಿ 256 ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವುದು ಐತಿಹಾಸಿಕ ದಾಖಲೆ ಎಂದು ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ರಾಜೇಂದ್ರ ಭಟ್.ಕೆ ಹೇಳಿದರು.
ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಮತ್ತು ಜನತಾ ನ್ಯೂ ಇಂಗ್ಲೀಷ್ ಸ್ಕೂಲ್ ಕಿರಿಮಂಜೇಶ್ವರ ವತಿಯಿಂದ ಕುಂದಾಪುರ ಮೊಗವೀರ ಭವನದಲ್ಲಿ ಸೋಮವಾರ ನಡೆದ ಜನತಾ ನವನೀತ-2024,ಅಭಿವಿನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಣ್ಣ ಸಣ್ಣ ಸವಾಲು ಮತ್ತು ಸೋಲನ್ನು ಎದುರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಹೊಂದಿರುವುದು ಬಹಳ ಮುಖ್ಯವಾಗಿದ್ದು.ಅನ್ವೇಷಣೆಯಲ್ಲಿ ತೊಡಗಿಕೊಂಡು ಹೆಚ್ಚಾಗಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು ಎಂದು ಕಿವಿ ಮಾತನ್ನು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,2022 ರಲ್ಲಿ ಆರಂಭಗೊಂಡಿರುವ ಜನತ ಕಾಲೇಜು ಎರಡೆ ವರ್ಷದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರನ್ನು ಗಳಿಸಿದೆ.ಕನಿಷ್ಠ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಂಡು ಉತ್ತಮ ಶಿಕ್ಷಣವನ್ನು ನೀಡುವುದರ ಮೂಲಕ ಶೇಕಡಾ 100 ಫಲಿತಾಂಶವನ್ನು ಗಳಿಸಿರುವುದು ಕಾಲೇಜಿನಲ್ಲಿ ನೀಡುತ್ತಿರುವ ಉತ್ತಮ ಶಿಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.ಶಿಕ್ಷಣ ಪಠ್ಯೇತರ ಚಟುವಟಿಕೆ ಜತೆಗೆ ಎಲ್ಲಾ ವಿಭಾಗದಲ್ಲಿಯೂ ತೊಡಗಿಕೊಂಡಿರುವ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್ಯಾಂಕ್‍ಗಳನ್ನು ಗಳಿಸಿರುವುದು ಹೆಮ್ಮೆ ವಿಷಯವಾಗಿದೆ ಎಂದರು.
ಜನತಾ ಪ್ರೌಢಶಾಲೆ ಹೆಮ್ಮಾಡಿ ಮುಖ್ಯ ಶಿಕ್ಷಕ ಮಂಜು ಕಾಳವಾರ,ಜನತಾ ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ,ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.ಪ್ರಿನ್ಸಿಪಾಲ್ ಗಣೇಶ ಮೊಗವೀರ ಸ್ವಾಗತಿಸಿದರು.ಉಪನ್ಯಾಸಕ ಉದಯ ನಾಯ್ಕ್ ನಿರೂಪಿಸಿದರು.2023-24ನೇ ಸಾಲಿನಲ್ಲಿ ಅಧಿಕ ಅಂಕಗಳಿಸಿದ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್ಯಾಂಕ್‍ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಾಲೇಜಿನ ಸಾಂಸ್ಕ್ರತಿಕ ತಂಡದ ವಿದ್ಯಾರ್ಥಿಗಳಿಂದ ಹಿಗ್ಗಿನ-ಬುಗ್ಗೆ ಸಾಂಸ್ಕøತಿಕ ವೈಭವ ಕಾರ್ಯಕ್ರಮ ಜರುಗಿತು.ವಿದ್ಯಾರ್ಥಿಗಳ ಪೆÇೀಷಕರು ಹಾಜರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

2 months ago