ಕುಂದಾಪುರ:ಕಂಬದಕೋಣೆ ಶಿಕ್ಷಣ ಸಂಯೋಜಕ ಕೇಂದ್ರದ ಜುಲೈ ತಿಂಗಳ ಸಮಾಲೋಚನಾ ಸಭೆ ಸ.ಹಿ.ಪ್ರಾ.ಶಾಲೆ ಬಡಾಕೆರೆಯಲ್ಲಿ ಶನಿವಾರ ನಡೆಯಿತು.
ಶ್ರೀ ಶೃಂಗೇರಿ ಪೀಠದ ಪ್ರಾಂತೀಯ ಧರ್ಮಾಧಿಕಾರಿಗಳು ಹಾಗೂ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ವೇದ.ಮೂರ್ತಿ ಲೋಕೇಶ ಅಡಿಗ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ,ಶಿಕ್ಷಣದೊಂದಿಗೆ ಸತ್ಯಶೀಲತೆ,ನ್ಯಾಯ, ಧರ್ಮಾಚರಣೆ,ಸಂಸ್ಕೃತಿಗಳು ಕೂಡಿದಾಗ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತದೆ.ಶಿಕ್ಷಕರು ಅಂತಹ ಗುರುತರವಾದ ಜವಾಬ್ದಾರಿಯನ್ನು ವಹಿಸಿದಾಗ ಶಿಕ್ಷಣ ಪರಿಪೂರ್ಣವಾಗುವುದು ಎಂದು ಶುಭ ಹಾರೈಸಿದರು.
ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕಾ ಬಲವರ್ಧನೆಗಾಗಿ ನಡೆಸಬಹುದಾದ ಕಾರ್ಯ ಚಟುವಟಿಕೆಗಳ ಬಗ್ಗೆ ಬೆಳಕು ಚೆಲುವ ಮಾಹಿತಿಯನ್ನು ಶಿಕ್ಷಕರಿಗೆ ನೀಡಲಾಯಿತು.
ಶಿಕ್ಷಕರಿಗಾಗಿ ನಡೆದ ಸನಾಲೋಚನಾ ಸಭೆಯಲ್ಲಿ ಸರಳ ಪ್ರಯೋಗ ನಡೆಸುವುದರ ಕುರಿತು ಬಿ.ಆರ್.ಪಿ.ರಾಮಕೃಷ್ಣ ದೇವಾಡಿಗರು ಶಿಕ್ಷಕರಿಂದ ಚರ್ಚಿಸಿದರು.ಜಯಪ್ರಕಾಶ್ ಶೆಟ್ಟಿ ಅವರು ಗಣಿತ ವಿಷಯದ ಕೆಲವು ಆಧಾರಿತ ಕಲಿಕಾಂಶವನ್ನು ಚಟುವಟಿಕೆ, ಮೋಜಿನ ಲೆಕ್ಕಗಳ ಮೂಲಕ ಆಕರ್ಷಕವಾಗಿ ನಿರ್ವಹಿಸಿದರು. ಸಂಪನ್ಮೂಲ ವ್ಯಕ್ತಿ ಸುಮಂಗಲ ಎಫ್.ಎಲ್.ಎನ್.ಕುರಿತು ಕ್ರೀಡಾವಿಧಾನದ ಮೂಲಕ ಉತ್ತಮವಾಗಿ ತರಗತಿ ನಡೆಸಿಕೊಟ್ಟರು.ವಿಶ್ವನಾಥ ಪೂಜಾರಿ,ಎಸ್.ಆನಂದ ಮೊಗವೀರ,ಎಸ್.ಡಿ.ಎಮ್. ಸಿ.ಅಧ್ಯಕ್ಷ ಶ್ರೀಧರ ದೇವಾಡಿಗ, ಮಂಜುನಾಥ ದೇವಾಡಿಗ,ರಾಜ ಖಾರ್ವಿ,ಶಾಲಾ ಮುಖ್ಯ ಶಿಕ್ಷಕಿ ರೋಹಿಣಿ,ಮಾಧವ ಅಡಿಗ, ರಶ್ಮಿ,ಸಂಪನ್ಮೂಲ ವ್ಯಕ್ತಿ ಜಯಪ್ರಕಾಶ ಶೆಟ್ಟಿ,ರಾಕೇಶ್ ಶೇಟ್ ಮೊದಲಾದವರು ಉಪಸ್ಥಿತರಿದ್ದರು.ಸಿ.ಆರ್.ಪಿ.ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.ಮುಖ್ಯ ಶಿಕ್ಷಕಿ ರೋಹಿಣಿ ವಂದಿಸಿದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…