ಕುಂದಾಪುರ:ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ಮತ್ತು ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮಿಡೀಯಂ ಸ್ಕೂಲ್ನಲ್ಲಿ (ಶುಭದಾ) ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಹೆಮ್ಮಾಡಿ ಜನತಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ವಿದ್ಯಾರ್ಥಿ ಜೀವನದಲ್ಲೆ ರಾಷ್ಟ್ರ ಭಕ್ತಿಯನ್ನು ಮೈಗೂಡಿಸಿ ಕೊಳ್ಳಬೇಕು.ಸೈನಿಕರು ಹಾಗೂ ರೈತರು ನಮ್ಮ ದೇಶದ ರಿಯಲ್ ಹಿರೋಗಳು ಎಂದು ಅಭಿಪ್ರಾಯಪಟ್ಟರು.ಭಾರತೀಯ ಸೇನೆಯ ನಿವೃತ್ತ ಜೂನಿಯರ್ ಕಮಿಷನ್ಸ್ ಅಧಿಕಾರಿ ಜೋಷಿ ಪಿ.ಪಿ.ಹುತಾತ್ಮ ಸೈನಿಕರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಸೈನಿಕರ ತ್ಯಾಗ ಬಲಿದಾನಗಳನ್ನು ಸ್ಮರಿಸಿದರು.ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ, ಬೋಧಕ/ಬೋಧಕೇತರ ವೃಂದದವರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಭಿಜಿತ್ ಸ್ವಾಗತಿಸಿದರು.ಉಪನ್ಯಾಸಕರಾದ ಉದಯ ನಾಯ್ಕ ನಿರೂಪಿಸಿದರು.ಹರ್ಷ ಶೆಟ್ಟಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…