ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರ ಅಪಾಯಕಾರಿ ಜಂಕ್ಷನ್ ತಲ್ಲೂರು,ಹೆಮ್ಮಾಡಿ.ತ್ರಾಸಿ ಹಾಗೂ ಯಡ್ತರೆಯಲ್ಲಿ ಅಂಡರ್ಪಾಸ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ಬೈಂದೂರು ಮತ್ತು ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜನರ ಸುರಕ್ಷತೆ ದೃಷ್ಟಿಯಿಂದ ಅಂಡರ್ಪಾಸ್ ನಿರ್ಮಿಸುವಂತೆ ಡಿಸೆಂಬರ್ ತಿಂಗಳಿನಲ್ಲಿಯೇ ಮನವಿಯನ್ನು ಸಲ್ಲಿಸಲಾಗಿದ್ದು.ಕೇಂದ್ರ ಸಚಿವರು ಮನವಿಯನ್ನು ಪುರಸ್ಕರಿಸಿದ್ದಾರೆ.ಒಟ್ಟು ಆರು ಕಡೆ ಅಂಡರ್ಪಾಸ್ ನಿರ್ಮಿಸುವಂತೆ ಮನವಿಯನ್ನು ನೀಡಲಾಗಿದ್ದು ನಾಲ್ಕು ಕಡೆ ಅಡರ್ಪಾಸ್ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿದೆ ಎಂದು ಅವರು ಹೇಳಿದ್ದಾರೆ.
ಅರಾಟೆ -ಮುಳ್ಳಿಕಟ್ಟೆ ಹಾಗೂ ಶಿರೂರು,ನಿರ್ಗದ್ದೆ ವರೆಗೆ ಸರ್ವಿಸ್ ನಿರ್ಮಾಣ ಹಾಗೂ ಬೀದಿ ದೀಪ ಅಳವಡಿಕೆಗೆ ಕೇಂದ್ರ ಸಚಿವರು ಸೂಚನೆ ನೀಡಿದ್ದಾರೆ.ತಾಂತ್ರಿಕ ಕಾರಣದಿಂದಾಗಿ ಮುಳ್ಳಿಕಟ್ಟೆ ಮತ್ತು ಶಿರೂರು ಬಳಿ ಅಂಡರ್ಪಾಸ್ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…