ಕುಂದಾಪುರ

ಬಾವಿಯೊಳಗೆ ಅವಿತು ಕೊಂಡಿದ್ದ ಮೊಸಳೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Share

Advertisement
Advertisement

ಕುಂದಾಪುರ:ಬೈಂದೂರು ತಾಲೂಕಿನ ನಾಗೂರು ಕೊಡೇರಿ ವಿಶ್ವನಾಥ ಉಡುಪ ಅವರಿಗೆ ಸಂಬಂಧಿಸಿದ ಬಾವಿಯೊಳಗೆ ಮಂಗಳವಾರ ಪತ್ತೆಯಾಗಿದ್ದ ಮೊಸಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ಬೀಡಿನ ಬಲೆಯನ್ನು ಬಾವಿ ಒಳಗೆ ಬಿಡುವುದರ ಮೂಲಕ ಸುರಕ್ಷಿತವಾಗಿ ಮೊಸಳೆಯನ್ನು ಬುಧವಾರ ಸೆರೆ ಹಿಡಿಯಲಾಗಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಬಾವಿಯೊಳಗೆ ಅವಿತುಕೊಂಡಿದ್ದ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯಲು ಮಂಗಳವಾರ ಬೊನ್ ಇಟ್ಟು ಹಲವು ಉಪಕ್ರಮಗಳನ್ನು ಬಳಕೆ ಮಾಡಿದ್ದರು ಯಾವುದೆ ರೀತಿ ಪ್ರಯೋಜನೆ ಆಗಿರಲಿಲ್ಲ.ಸಿಸಿಟಿವಿ ಮೂಲಕ ರಾತ್ರಿಯಿಡಿ ಮೊಸಳೆ ಚಲನವಲನದ ಬಗ್ಗೆ ನಿಗಾವನ್ನು ಇಡಲಾಗಿತ್ತು.ಸ್ಥಳೀಯ ಮೀನುಗಾರರ ಸಲಹೆಯೊಂದಿಗೆ ಬುಧವಾರ ವಿಶೇಷ ಕಾರ್ಯಚರಣೆ ನಡೆಸಿ ಬೃಹತ್ ಗಾತ್ರದ ಮೊಸಳೆಯನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ.ಆರೋಗ್ಯವಂತಹ ಮೊಸಳೆಯನ್ನು ಸುರಕ್ಷಿತ ಸ್ಥಳಕ್ಕೆ ಬಿಡಲು ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.ಮೂರು ನಾಲ್ಕು ದಿನದ ಹಿಂದೆಯೆ ಮೊಸಳೆ ಗದ್ದೆ ಬೈಲಿನಲ್ಲಿ ಪತ್ತೆ ಹೊರಳಾಡಿಕೊಂಡು ಹೋಗಿರುವ ಬಗ್ಗೆ ಕುರುಹು ಪತ್ತೆ ಆಗಿತ್ತು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ ಪೊಲೀಸ್ ಇಲಾಖೆ ಕಂದಾಯ ಇಲಾಖೆ,ಪಶು ವೈದ್ಯಾಧಿಕಾರಿಗಳು ಸ್ಥಳೀಯರು,ಅಗ್ನಿ ಶಾಮಕದಳದ ಸಿಬ್ಬಂದಿಗಳು, ಮೀನುಗಾರರು ಭಾಗವಹಿಸಿದ್ದರು.
ಅರಣ್ಯಾಧಿಕಾರಿ ಸಂದೇಶ್ ಮಾತನಾಡಿ,ಕಾರ್ಯಚರಣೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

Advertisement
Advertisement
Advertisement

Share
Team Kundapur Times

Recent Posts

ಅಕ್ಟೋಬರ್ 20 ರಂದು ಕುಂದಾಪುರ ತಾಲೂಕು ವಿಪ್ರ ಮಹಿಳಾ ಸಮಾವೇಶ ಸದ್ಭಾವನಾ ಲಹರಿ-2024 ಕಾರ್ಯಕ್ರಮ

ಬೈಂದೂರು:ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಮತ್ತು ಮಹಿಳಾ ವೇದಿಕೆ ವತಿಯಿಂದ ಅಕ್ಟೋಬರ್ 20 ರ ಭಾನುವಾರ ದಂದು ನಾಗೂರು…

9 hours ago

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

2 days ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

3 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

4 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

5 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

6 days ago