ಪ್ರಾದೇಶಿಕ ಸುದ್ದಿ

ಕೋಟ:ಆದರ್ಶ ದಂಪತಿಗಳಿಗೆ ವೈಕುಂಠ ಭಾಗ್ಯ,ಸಾವಿನಲ್ಲೂ ಒಂದಾದ ಹಿರಿಯ ಜೀವಗಳು

Share

ಕುಂದಾಪುರ:ಸಪ್ತಪದಿ ತುಳಿದು ದಂಪತಿಗಳಾಗಿ ಆದರ್ಶ ಜೀವನ ಕಟ್ಟಿಕೊಂಡಿದ್ದ ಹಿರಿಯ ದಂಪತಿಗಳು ಒಂದೇ ದಿನ ಮೊಕ್ಷವನ್ನು ಹೊಂದುವುದರ ಮೂಲಕ ಸಾವಿನಲ್ಲೂ ಜೊತೆಯಾಗಿ ಸಾಗಿದ ಅಪರೂಪದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ನಡೆದಿದೆ.
ಕೋಟ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಪತ್ನಿ ಮುತ್ತು ಪೂಜಾರ್ತಿ(53) ಎನ್ನುವ ದಂಪತಿಗಳು ಮರಣ ಹೊಂದುವಾಗಲೂ ಜೊತೆಯಾಗಿ ಇಹಲೋಕ ತ್ಯಜಿಸಿದ್ದಾರೆ.ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆಮಾಡುತ್ತ, ಕೃಷಿರಾಗಿ ಗುರುತಿಸಿಕೊಂಡಿದ್ದರು.ಅವರ ಪತ್ನಿ ಮುತ್ತು ಪೂಜಾರ್ತಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿ ಯಾಗಿದ್ದವರು.ಕೃಷ್ಣ ಪೂಜಾರಿ ಅವರ ಪತ್ನಿ ಮುತ್ತು ಪೂಜಾರ್ತಿ ಅವರು ಬುಧವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು.ಮುತ್ತು ಪೂಜಾರ್ತಿಯವರ ಅಂತ್ಯಕ್ರಿಯೆ ಮುಗಿಸಿ ವಾಪಾಸ್ಸು ಬರುತ್ತಿದ್ದ ವೇಳೆ ಪತ್ನಿ ಕಳೆದುಕೊಂಡಿದ್ದ ದುಃಖದಲ್ಲಿದ್ದ ಅವರ ಪತಿ ಕೃಷ್ಣ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತ ದಂಪತಿಗಳು ಮೂವರು ಪುತ್ರಿ ಒರ್ವ ಪುತ್ರರನ್ನು ಅಗಲಿದ್ದಾರೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago