ಕುಂದಾಪುರ:ಸಪ್ತಪದಿ ತುಳಿದು ದಂಪತಿಗಳಾಗಿ ಆದರ್ಶ ಜೀವನ ಕಟ್ಟಿಕೊಂಡಿದ್ದ ಹಿರಿಯ ದಂಪತಿಗಳು ಒಂದೇ ದಿನ ಮೊಕ್ಷವನ್ನು ಹೊಂದುವುದರ ಮೂಲಕ ಸಾವಿನಲ್ಲೂ ಜೊತೆಯಾಗಿ ಸಾಗಿದ ಅಪರೂಪದ ಘಟನೆ ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಎಂಬಲ್ಲಿ ನಡೆದಿದೆ.
ಕೋಟ ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ (58) ಮತ್ತು ಅವರ ಪತ್ನಿ ಮುತ್ತು ಪೂಜಾರ್ತಿ(53) ಎನ್ನುವ ದಂಪತಿಗಳು ಮರಣ ಹೊಂದುವಾಗಲೂ ಜೊತೆಯಾಗಿ ಇಹಲೋಕ ತ್ಯಜಿಸಿದ್ದಾರೆ.ಕಂಬಳಕಟ್ಟು ಗುರಿಕಾರ ಮನೆ ಕೃಷ್ಣ ಪೂಜಾರಿ ಬ್ರಹ್ಮಬೈದರ್ಕಳ ಕಂಬಳಾಭಿಮಾನಿಯಾಗಿ, ಕಂಬಳದ ಸ್ವಯಂಸೇವಕರಾಗಿ ನಿರಂತರ ಸೇವೆಮಾಡುತ್ತ, ಕೃಷಿರಾಗಿ ಗುರುತಿಸಿಕೊಂಡಿದ್ದರು.ಅವರ ಪತ್ನಿ ಮುತ್ತು ಪೂಜಾರ್ತಿ ಬನ್ನಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕಿ ಯಾಗಿದ್ದವರು.ಕೃಷ್ಣ ಪೂಜಾರಿ ಅವರ ಪತ್ನಿ ಮುತ್ತು ಪೂಜಾರ್ತಿ ಅವರು ಬುಧವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು.ಮುತ್ತು ಪೂಜಾರ್ತಿಯವರ ಅಂತ್ಯಕ್ರಿಯೆ ಮುಗಿಸಿ ವಾಪಾಸ್ಸು ಬರುತ್ತಿದ್ದ ವೇಳೆ ಪತ್ನಿ ಕಳೆದುಕೊಂಡಿದ್ದ ದುಃಖದಲ್ಲಿದ್ದ ಅವರ ಪತಿ ಕೃಷ್ಣ ಪೂಜಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತ ದಂಪತಿಗಳು ಮೂವರು ಪುತ್ರಿ ಒರ್ವ ಪುತ್ರರನ್ನು ಅಗಲಿದ್ದಾರೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…