ಕುಂದಾಪುರ

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಬಿ ವೈ ರಾಘವೇಂದ್ರ ಮನವಿ ಸಲ್ಲಿಕೆ

Share

ಕುಂದಾಪುರ:ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಅನುಮೋದನೆ ನೀಡುವಂತೆ ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.
ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.ವಿವಿಧ ರಾಜ್ಯಗಳಿಂದ ಹಾಗೂ ಹೊರ ದೇಶಗಳಿಂದ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ.
ಕ್ಷೇತ್ರದಲ್ಲಿ ಮೂಲಸೌಕರ್ಯದ ಜೊತೆಗೆ ಸೌಪರ್ಣಿಕಾ ನದಿ ಸ್ವಚ್ಛತೆ,ಶಂಕರಾಚಾರ್ಯ ಥೀಮ್ ಪಾರ್ಕ್,ಮಲ್ಟಿಲೆವೆಲ್ ಪಾರ್ಕಿಂಗ್,ವಿಮಾನ,ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ,ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಸ್ಥಾಗಳ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳನ್ನೊಳಗೊಂಡ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ಮಂಜೂರು ಮಾಡುವಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹಾಗೂ ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಧರ್ಮದರ್ಶಿ ಕೃಷ್ಣ ಪ್ರಸಾದ ಅಡಯಂತಾಯ,ಬೈಂದೂರಿನ ವೆಂಕಟೇಶ್ ಕಿಣಿ ಅವರು ಉಪಸ್ಥಿತರಿದ್ದರು.ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣದ ಬಗ್ಗೆ ಮಾನ್ಯ ಕೇಂದ್ರ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುತ್ತಾರೆ.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago