ಉತ್ತರ ಕನ್ನಡ

ಕಾರವಾರ:ಮುರಿದು ಬಿದ್ದ ಕಾಳಿ ಸೇತುವೆ,ಮುಂದುವರೆದ ಸೇತುವೆ ದುರ್ಘಟನೆ

Share

Advertisement
Advertisement
Advertisement

ಕಾರವಾರ:ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕಾರವಾರ ಮತ್ತು ಗೋವಾಕ್ಕೆ ಸಂಪರ್ಕಿಸುವ ಸುಮಾರು 40 ವರ್ಷಕ್ಕೂ ಹಳೆಯದಾದ ಕಾಳಿ ಸೇತುವೆ ಮಂಗಳವಾರ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದು ಬಿದ್ದಿದೆ.ದೇಶಾದ್ಯಂತ ಸೇತುವೆ ಮುರಿದು ಬೀಳುವ ದುರ್ಘಟನೆ ಮುಂದುವರೆದಿದ್ದು ಜನರು ಆತಂಕಿತರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕೋಡಿಭಾಗ್ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೃಹತ್ ಸೇತುವೆ ಯಾವುದೆ ರೀತಿಯ ಮುನ್ಸೂಚನೆ ಸಿಗದೆ ಇರುವ ರೀತಿಯಲ್ಲಿ ನದಿಗೆ ರಾತ್ರೋರಾತ್ರಿ ಉರುಳಿ ಬಿದ್ದಿದೆ.ಈ ವೇಳೆ ಸೇತುವೆ ಮೇಲೆ ಸಾಗುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ.ಟ್ರಕ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲದ ಚಾಲಕ ಬಾಲ್ ಮುರುಗನ್ (37) ಟ್ರಕ್ ಮುಂಭಾಗದ ಗಾಜನ್ನು ಒಡೆದು ಲಾರಿ ಕ್ಯಾಬಿನ್ ಮೇಲೆ ಕುಳಿತು ರಕ್ಷಣೆ ಮಾಡುವಂತೆ ಕೂಗಿ ಕೊಂಡಿದ್ದರು.ಬೀಟ್ ಪೊಲೀಸ್ ಕಾರ್ಯಚರಣೆ ಮಾಡುತ್ತಿದ್ದ ಪೊಲೀಸರು ಲಾರಿ ಚಾಲಕನನ್ನು ರಕ್ಷಿಸಿದ್ದಾರೆ.ಚಾಲಕ ಪ್ರಾಣಾಪಯದಿಂದ ಪಾರಾಗಿದ್ದಾರೆ.ರಾತ್ರಿ ಸಮಯದಲ್ಲಿ ದುರ್ಘಟನೆ ನಡೆದಿದ್ದರಿಂದ ಹೆಚ್ಚಿನ ಅಪಾಯ ತಪ್ಪಿದೆ.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿದ್ದ ಐಆರ್‍ಬಿ ಕಂಪನಿ ಒಂದು ಹೊಸ ಸೇತುವೆಯನ್ನು ಮಾತ್ರ ನಿರ್ಮಿಸಿದ್ದು.ಇನ್ನೊಂದು ಮಾರ್ಗದಲ್ಲಿ ಹಳೆ ಸೇತುವೆಯನ್ನೆ ಬಳಕೆ ಮಾಡಿಕೊಂಡಿತ್ತು.ಸೇತುವೆಯ ಗುಣಮಟ್ಟವನ್ನು ಸರಿಯಾದ ರೀತಿಯಲ್ಲಿ ಪರೀಕ್ಷಿಸದೆ ಕಾರಣದಿಂದಾಗಿ ಇವೊಂದು ಘಟನೆ ನಡೆದಿದೆ ಎಂದು ಜನರು ದೂರಿದ್ದಾರೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

3 hours ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 day ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

4 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

5 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

5 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago