ಕಾರವಾರ:ಕಾಳಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕಾರವಾರ ಮತ್ತು ಗೋವಾಕ್ಕೆ ಸಂಪರ್ಕಿಸುವ ಸುಮಾರು 40 ವರ್ಷಕ್ಕೂ ಹಳೆಯದಾದ ಕಾಳಿ ಸೇತುವೆ ಮಂಗಳವಾರ ಮಧ್ಯ ರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದು ಬಿದ್ದಿದೆ.ದೇಶಾದ್ಯಂತ ಸೇತುವೆ ಮುರಿದು ಬೀಳುವ ದುರ್ಘಟನೆ ಮುಂದುವರೆದಿದ್ದು ಜನರು ಆತಂಕಿತರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕೋಡಿಭಾಗ್ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬೃಹತ್ ಸೇತುವೆ ಯಾವುದೆ ರೀತಿಯ ಮುನ್ಸೂಚನೆ ಸಿಗದೆ ಇರುವ ರೀತಿಯಲ್ಲಿ ನದಿಗೆ ರಾತ್ರೋರಾತ್ರಿ ಉರುಳಿ ಬಿದ್ದಿದೆ.ಈ ವೇಳೆ ಸೇತುವೆ ಮೇಲೆ ಸಾಗುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ.ಟ್ರಕ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲದ ಚಾಲಕ ಬಾಲ್ ಮುರುಗನ್ (37) ಟ್ರಕ್ ಮುಂಭಾಗದ ಗಾಜನ್ನು ಒಡೆದು ಲಾರಿ ಕ್ಯಾಬಿನ್ ಮೇಲೆ ಕುಳಿತು ರಕ್ಷಣೆ ಮಾಡುವಂತೆ ಕೂಗಿ ಕೊಂಡಿದ್ದರು.ಬೀಟ್ ಪೊಲೀಸ್ ಕಾರ್ಯಚರಣೆ ಮಾಡುತ್ತಿದ್ದ ಪೊಲೀಸರು ಲಾರಿ ಚಾಲಕನನ್ನು ರಕ್ಷಿಸಿದ್ದಾರೆ.ಚಾಲಕ ಪ್ರಾಣಾಪಯದಿಂದ ಪಾರಾಗಿದ್ದಾರೆ.ರಾತ್ರಿ ಸಮಯದಲ್ಲಿ ದುರ್ಘಟನೆ ನಡೆದಿದ್ದರಿಂದ ಹೆಚ್ಚಿನ ಅಪಾಯ ತಪ್ಪಿದೆ.ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ನಿರ್ವಹಿಸುತ್ತಿದ್ದ ಐಆರ್ಬಿ ಕಂಪನಿ ಒಂದು ಹೊಸ ಸೇತುವೆಯನ್ನು ಮಾತ್ರ ನಿರ್ಮಿಸಿದ್ದು.ಇನ್ನೊಂದು ಮಾರ್ಗದಲ್ಲಿ ಹಳೆ ಸೇತುವೆಯನ್ನೆ ಬಳಕೆ ಮಾಡಿಕೊಂಡಿತ್ತು.ಸೇತುವೆಯ ಗುಣಮಟ್ಟವನ್ನು ಸರಿಯಾದ ರೀತಿಯಲ್ಲಿ ಪರೀಕ್ಷಿಸದೆ ಕಾರಣದಿಂದಾಗಿ ಇವೊಂದು ಘಟನೆ ನಡೆದಿದೆ ಎಂದು ಜನರು ದೂರಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…