ಕುಂದಾಪುರ

ನಾಗನಿಗೆ ಹಣ್ಣು ಕಾಯಿ,ತನು ಸೇವೆ ಅರ್ಪಿಸಿದ ಭಕ್ತರು

Share

ಕುಂದಾಪುರ:ಪರಶುರಾಮ ಸೃಷ್ಟಿಯ ನೆಲದಲ್ಲಿ ನಾಗನಿಗೆ ಅಗ್ರಸ್ಥಾನವಿದೆ.ನಾಗ ದೇವರ ಪೂಜೆ ಮಾಡಲು ಮಡಿ ಮೈಲಿಗೆ ಅತ್ಯವಶ್ಯಕ.ರಾಜ್ಯದ ಬೇರೆ ಬೇರೆ ಭಾಗದಲ್ಲಿ ನಾಗ ದೇವರ ಶಿಲೆಯನ್ನು ಮುಟ್ಟಿ ಪೂಜೆ ಮಾಡಿದರೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಾಹ್ಮಣರು ಬಿಟ್ಟರೆ ಬೇರೆ ಯಾವ ಜಾತಿಗೂ ನಾಗ ಶಿಲೆಯನ್ನು ಮುಟ್ಟಿ ಪೂಜೆ ಮಾಡುವುದು ನಿಷಿದ್ಧ.ಇಲ್ಲಿನ ಪ್ರತಿ ಕುಟುಂಬಕ್ಕೂ ಮೂಲ ನಾಗ ದೇವರಿದ್ದು ಸಂತಾನ ಕಾರಕನೆಂದೆ ಪೂಜಿಸಲಾಗುತ್ತದೆ.ನಾಗರ ಪಂಚಮಿ ಹಬ್ಬದ ದಿನದಂದು ಮೂಲ ನಾಗನಿಗೆ ಹಣ್ಣು ಕಾಯಿ ಸೇವೆ ನೀಡಿ ತನು ಹಾಕಲಾಗುತ್ತದೆ.ಇದು ಅನಾದಿ ಕಾಲದಿಂದಲೂ ನಡೆದು ಬಂದಂತಹ ಪದ್ದತಿ.
ನಾಗನಿಗೆ ತನು ಸೇವೆ ಅರ್ಪಣೆ ಮಾಡಲು ಸೀಯಾಳ ಬಾಳೆಹಣ್ಣು ಅವಶ್ಯಕವಾಗಿದ್ದು ಸೀಯಾಳ ಮತ್ತು ಬಾಳೆ ಹಣ್ಣಿನ ಬೆಲೆ ದುಬಾರಿ ಆಗಿದೆ.ಸಾಮಾನ್ಯವಾಗಿ ಮಳೆಗಾಲದಲ್ಲಿ ಸೀಯಾಳಕ್ಕೆ ಬೇಡಿಕೆ ಕಡಿಮೆ ಇರುತ್ತದೆ.ಆದರೂ ಸೀಯಾಳದ ಬೆಲೆ ಬೇಸಿಗೆ ತಿಂಗಳಿನಷ್ಟೆ ಇದೆ.ಮಾರುಕಟ್ಟೆಯಲ್ಲಿ ಸೀಯಾಳವನ್ನು 40 ರಿಂದ 50.ರೂ ವರೆಗೆ ಮಾರಾಟ ಮಾಡಲಾಗುತ್ತಿದೆ.ಬಾಳೆ ಹಣ್ಣು ಕೆ.ಜಿ ಒಂದರ ಬೆಲೆ 60 ರಿಂದ 70.ರೂ ಇದೆ.ಧಾರಕಾರವಾಗಿ ಮಳೆ ಸುರಿದಿದ್ದರು ಈ ಸಲ ಮಳೆಗಾಲದಲ್ಲಿ ಸೀಯಾಳದ ಬೆಲೆ ಇಳಿಕೆ ಆಗಿಲ್ಲ.ತೆಂಗು ಬೆಳೆ ಕೊರತೆ ಯಿಂದಾಗಿ ಸೀಯಾಳ ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದರಿಂದ ಬೆಲೆ ಮಳೆಗಾಲದಲ್ಲಿಯೂ ಇಳಿದಿಲ್ಲ ಎಂದು ಅಂಗಡಿ ಅವರು ಸೀಯಾಳ ದರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.ಹೂವಿನ ದರ ಸ್ವಲ್ಪ ಮಟ್ಟಿಕೆ ಕಡಿಮೆ ಇದ್ದರೂ,ಸೀಯಾಳ ಮತ್ತು ಬಾಳೆ ಹಣ್ಣಿನ ದರ ಭಕ್ತರ ಕೈಗೆ ಬಿಸಿ ಮುಟ್ಟಿಸಿದೆ.
ನಾಗನಿಗೆ ತನು ಸೇವೆ ಅರ್ಪಿಸಿದ ಭಕ್ತರು:ಶ್ರಾವಣ ಮಾಸದಲ್ಲಿ ಆಚರಣೆ ಮಾಡುವ ನಾಗರ ಪಂಚಮಿ ಹಬ್ಬ ಹಿಂದೂ ಬಾಂಧವರಿಗೆ ಪ್ರಮುಖವಾದ ಹಬ್ಬವಾಗಿದೆ.ದೇಶದ ನಾನಾ ಭಾಗದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾ ಭಕ್ತಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ನಾಗರ ಪಂಚಮಿ ಹಬ್ಬ ಎಷ್ಟು ಪ್ರಾಮೂಖ್ಯವೊ ಉತ್ತರ ಕನ್ನಡದ ಭಾಗದ ಜನರಿಗೂ ಅಷ್ಟೆ ಪ್ರಮುಖವಾದ ಹಬ್ಬವಾಗಿದೆ.
ನಾಗರ ಪಂಚಮಿ ಹಬ್ಬ ಸನಿಹಾಕ,ಅಣ್ಣ ಬರಲಿಲ್ಲಾ ಇನ್ನೂ ಕರಿಲಾಕಾ ಎಂಬ ಜಾನಪದ ಹಾಡು ಬಹಳಷ್ಟು ಜನಪ್ರೀತಿ ಗಳಿಸಿದೆ.ಈ ಜಾನಪದ ಹಾಡು ಉತ್ತರ ಕನ್ನಡದಲ್ಲಿ ಆಚರಿಸಲ್ಪಡುವ ಪಂಚಮಿ ಹಬ್ಬದ ಮಹತ್ವವನ್ನು ಸಾರಿ ಹೇಳುತ್ತದೆ.ಆಷಾಢ ಮಾಸ ಮುಗಿದು ಶ್ರಾವಣ ಮಾಸ ಕಾಲಿಡುತ್ತಲೆ ಹಬ್ಬಗಳ ಸರಣಿ ಆರಂಭಗೊಳ್ಳುತ್ತದೆ.

@ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago