ಕುಂದಾಪುರ

ನಾಗನಿಗೆ ಹಣ್ಣು ಕಾಯಿ,ತನು ಸೇವೆ ಅರ್ಪಿಸಿದ ಭಕ್ತರು

Share

ಕುಂದಾಪುರ:ಪರಶುರಾಮ ಸೃಷ್ಟಿಯ ನೆಲದಲ್ಲಿ ನಾಗನಿಗೆ ಅಗ್ರಸ್ಥಾನವಿದೆ.ನಾಗ ದೇವರ ಪೂಜೆ ಮಾಡಲು ಮಡಿ ಮೈಲಿಗೆ ಅತ್ಯವಶ್ಯಕ.ರಾಜ್ಯದ ಬೇರೆ ಬೇರೆ ಭಾಗದಲ್ಲಿ ನಾಗ ದೇವರ ಶಿಲೆಯನ್ನು ಮುಟ್ಟಿ ಪೂಜೆ ಮಾಡಿದರೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಾಹ್ಮಣರು ಬಿಟ್ಟರೆ ಬೇರೆ ಯಾವ ಜಾತಿಗೂ ನಾಗ ಶಿಲೆಯನ್ನು ಮುಟ್ಟಿ ಪೂಜೆ ಮಾಡುವುದು ನಿಷಿದ್ಧ.ಇಲ್ಲಿನ ಪ್ರತಿ ಕುಟುಂಬಕ್ಕೂ ಮೂಲ ನಾಗ ದೇವರಿದ್ದು ಸಂತಾನ ಕಾರಕನೆಂದೆ ಪೂಜಿಸಲಾಗುತ್ತದೆ.ನಾಗರ ಪಂಚಮಿ ಹಬ್ಬದ ದಿನದಂದು ಮೂಲ ನಾಗನಿಗೆ ಹಣ್ಣು ಕಾಯಿ ಸೇವೆ ನೀಡಿ ತನು ಹಾಕಲಾಗುತ್ತದೆ.ಇದು ಅನಾದಿ ಕಾಲದಿಂದಲೂ ನಡೆದು ಬಂದಂತಹ ಪದ್ದತಿ.
ನಾಗನಿಗೆ ತನು ಸೇವೆ ಅರ್ಪಣೆ ಮಾಡಲು ಸೀಯಾಳ ಬಾಳೆಹಣ್ಣು ಅವಶ್ಯಕವಾಗಿದ್ದು ಸೀಯಾಳ ಮತ್ತು ಬಾಳೆ ಹಣ್ಣಿನ ಬೆಲೆ ದುಬಾರಿ ಆಗಿದೆ.ಸಾಮಾನ್ಯವಾಗಿ ಮಳೆಗಾಲದಲ್ಲಿ ಸೀಯಾಳಕ್ಕೆ ಬೇಡಿಕೆ ಕಡಿಮೆ ಇರುತ್ತದೆ.ಆದರೂ ಸೀಯಾಳದ ಬೆಲೆ ಬೇಸಿಗೆ ತಿಂಗಳಿನಷ್ಟೆ ಇದೆ.ಮಾರುಕಟ್ಟೆಯಲ್ಲಿ ಸೀಯಾಳವನ್ನು 40 ರಿಂದ 50.ರೂ ವರೆಗೆ ಮಾರಾಟ ಮಾಡಲಾಗುತ್ತಿದೆ.ಬಾಳೆ ಹಣ್ಣು ಕೆ.ಜಿ ಒಂದರ ಬೆಲೆ 60 ರಿಂದ 70.ರೂ ಇದೆ.ಧಾರಕಾರವಾಗಿ ಮಳೆ ಸುರಿದಿದ್ದರು ಈ ಸಲ ಮಳೆಗಾಲದಲ್ಲಿ ಸೀಯಾಳದ ಬೆಲೆ ಇಳಿಕೆ ಆಗಿಲ್ಲ.ತೆಂಗು ಬೆಳೆ ಕೊರತೆ ಯಿಂದಾಗಿ ಸೀಯಾಳ ಪೂರೈಕೆಯಲ್ಲಿ ವ್ಯತ್ಯಾಸವಾಗಿದ್ದರಿಂದ ಬೆಲೆ ಮಳೆಗಾಲದಲ್ಲಿಯೂ ಇಳಿದಿಲ್ಲ ಎಂದು ಅಂಗಡಿ ಅವರು ಸೀಯಾಳ ದರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.ಹೂವಿನ ದರ ಸ್ವಲ್ಪ ಮಟ್ಟಿಕೆ ಕಡಿಮೆ ಇದ್ದರೂ,ಸೀಯಾಳ ಮತ್ತು ಬಾಳೆ ಹಣ್ಣಿನ ದರ ಭಕ್ತರ ಕೈಗೆ ಬಿಸಿ ಮುಟ್ಟಿಸಿದೆ.
ನಾಗನಿಗೆ ತನು ಸೇವೆ ಅರ್ಪಿಸಿದ ಭಕ್ತರು:ಶ್ರಾವಣ ಮಾಸದಲ್ಲಿ ಆಚರಣೆ ಮಾಡುವ ನಾಗರ ಪಂಚಮಿ ಹಬ್ಬ ಹಿಂದೂ ಬಾಂಧವರಿಗೆ ಪ್ರಮುಖವಾದ ಹಬ್ಬವಾಗಿದೆ.ದೇಶದ ನಾನಾ ಭಾಗದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾ ಭಕ್ತಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ನಾಗರ ಪಂಚಮಿ ಹಬ್ಬ ಎಷ್ಟು ಪ್ರಾಮೂಖ್ಯವೊ ಉತ್ತರ ಕನ್ನಡದ ಭಾಗದ ಜನರಿಗೂ ಅಷ್ಟೆ ಪ್ರಮುಖವಾದ ಹಬ್ಬವಾಗಿದೆ.
ನಾಗರ ಪಂಚಮಿ ಹಬ್ಬ ಸನಿಹಾಕ,ಅಣ್ಣ ಬರಲಿಲ್ಲಾ ಇನ್ನೂ ಕರಿಲಾಕಾ ಎಂಬ ಜಾನಪದ ಹಾಡು ಬಹಳಷ್ಟು ಜನಪ್ರೀತಿ ಗಳಿಸಿದೆ.ಈ ಜಾನಪದ ಹಾಡು ಉತ್ತರ ಕನ್ನಡದಲ್ಲಿ ಆಚರಿಸಲ್ಪಡುವ ಪಂಚಮಿ ಹಬ್ಬದ ಮಹತ್ವವನ್ನು ಸಾರಿ ಹೇಳುತ್ತದೆ.ಆಷಾಢ ಮಾಸ ಮುಗಿದು ಶ್ರಾವಣ ಮಾಸ ಕಾಲಿಡುತ್ತಲೆ ಹಬ್ಬಗಳ ಸರಣಿ ಆರಂಭಗೊಳ್ಳುತ್ತದೆ.

@ಜಗದೀಶ ದೇವಾಡಿಗ ಮುಳ್ಳಿಕಟ್ಟೆ

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago