ಕುಂದಾಪುರ

ಯಳಜಿತ್ ಶಾಲೆಗೆ ನೂರರ ಸಂಭ್ರಮ:ಶತಮಾನೋತ್ಸವ ಕಟ್ಟಡ ನಿರ್ಮಾಣಕ್ಕೆ ಬೇಕಿದೆ ದಾನಿಗಳ ಸಹಕಾರ

Share

Advertisement
Advertisement
Advertisement
ಹೆಮ್ಮಾಡಿ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಕಳವು

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಗೆ 2024 ರ ನವೆಂಬರ್ ತಿಂಗಳಿನಲ್ಲಿ ನೂರು ವರ್ಷ ತುಂಬಲಿದೆ.ಒಂದು ಶತಮಾನವನ್ನು ಪೂರೈಸಲಿರುವ ಯಳಜಿತ್ ಶಾಲೆಯಲ್ಲಿ ಸುಮಾರು 1.50 ಕೋಟಿ.ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶಾಲಾ ಶತಮಾನೋತ್ಸವ ಸಮಿತಿ ನಿರ್ಣಯಿಸಿದೆ.ಅದರ ಅಂಗವಾಗಿ ಶಾಲೆಯಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು ಕಟ್ಟಡದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಶಾಲಾ ಶತಮಾನೋತ್ಸವ ಕಟ್ಟಡದ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಹಣದ ಅಡಚಣೆ ಉಂಟಾಗಿದ್ದು.ಹಳೆ ವಿದ್ಯಾರ್ಥಿಗಳು,ವಿದ್ಯಾಭಿಮಾನಿಗಳು,ಗ್ರಾಮಸ್ಥರು,ಉದ್ಯಮಿಗಳು,ದಾನಿಗಳು ಹೆಚ್ಚಿನ ಸಹಕಾರ ನೀಡಬೇಕೆಂದು ಶಾಲಾ ಶತಮಾನೋತ್ಸವ ಸಮಿತಿ ವಿನಂತಿಸಿಕೊಂಡಿದೆ.
ಯಳಜಿತ್ ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ವಕೀಲರಾದ ಮಂಗೇಶ್ ಶಾನುಭಾಗ್ ಮಾತನಾಡಿ,ಶಾಲೆಯಲ್ಲಿ ಕಲಿತಿರುವ ಸಾವಿರಾರು ವಿದ್ಯಾರ್ಥಿಗಳು ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಮುಖೇನ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.ಶತಮಾನೋತ್ಸವ ಸಂಭ್ರಮವನ್ನು ಆವಿಸ್ಮರಣೀಯವಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು.ಧನ ಸಾಹಯ ಮಾಡುವುದರ ಮುಖೇನ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ ಮಾತನಾಡಿ,ಸುಮಾರು ನೂರು ವರ್ಷ ತುಂಬಲಿರುವ ಯಳಜಿತ್ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.ಹಾಗಾಗಿ ಶಾಲೆಯಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕ್ಕೆನ್ನುವ ಉದ್ದೇಶದೊಂದಿಗೆ ಈಗಾಗಲೆ ಚಾಲನೆ ನೀಡಲಾಗಿದೆ.ಎಲ್ಲರೂ ಸಹಕಾರ ನೀಡಬೇಕೆಂದು ವಿನಂತಿಕೊಂಡರು.
ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ ಮಾತನಾಡಿ,ಶಾಲೆಯನ್ನು ಉಳಿಸಿ ಬೆಳೆಸಬೇಕು ಎನ್ನುವ ಉದ್ದೇಶದಿಂದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಹಿತ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ಸಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾರ್ಯ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ.ಶಾಲೆಯ ಅಭಿವೃದ್ಧಿಗೆ ಸರಕಾರ ಮತ್ತು ದಾನಿಗಳು ಸಹಕರಿಸಬೇಕೆಂದು ಕೇಳಿಕೊಂಡರು.ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಚಂದನ್ ಬಿಲ್ಲವ,ಖಜಾಂಜಿ ಕೆ.ಎಂ ಕೊಠಾರಿ,ಕಾರ್ಯದರ್ಶಿ ಪದ್ಮಾವತಿ,ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಸುಕುಮಾರ ಗೌಡ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ,ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago