ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಯಳಜಿತ್ ಶಾಲೆಗೆ 2024 ರ ನವೆಂಬರ್ ತಿಂಗಳಿನಲ್ಲಿ ನೂರು ವರ್ಷ ತುಂಬಲಿದೆ.ಒಂದು ಶತಮಾನವನ್ನು ಪೂರೈಸಲಿರುವ ಯಳಜಿತ್ ಶಾಲೆಯಲ್ಲಿ ಸುಮಾರು 1.50 ಕೋಟಿ.ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶಾಲಾ ಶತಮಾನೋತ್ಸವ ಸಮಿತಿ ನಿರ್ಣಯಿಸಿದೆ.ಅದರ ಅಂಗವಾಗಿ ಶಾಲೆಯಲ್ಲಿ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು ಕಟ್ಟಡದ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.
ಶಾಲಾ ಶತಮಾನೋತ್ಸವ ಕಟ್ಟಡದ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಹಣದ ಅಡಚಣೆ ಉಂಟಾಗಿದ್ದು.ಹಳೆ ವಿದ್ಯಾರ್ಥಿಗಳು,ವಿದ್ಯಾಭಿಮಾನಿಗಳು,ಗ್ರಾಮಸ್ಥರು,ಉದ್ಯಮಿಗಳು,ದಾನಿಗಳು ಹೆಚ್ಚಿನ ಸಹಕಾರ ನೀಡಬೇಕೆಂದು ಶಾಲಾ ಶತಮಾನೋತ್ಸವ ಸಮಿತಿ ವಿನಂತಿಸಿಕೊಂಡಿದೆ.
ಯಳಜಿತ್ ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷ ವಕೀಲರಾದ ಮಂಗೇಶ್ ಶಾನುಭಾಗ್ ಮಾತನಾಡಿ,ಶಾಲೆಯಲ್ಲಿ ಕಲಿತಿರುವ ಸಾವಿರಾರು ವಿದ್ಯಾರ್ಥಿಗಳು ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡುವುದರ ಮುಖೇನ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.ಶತಮಾನೋತ್ಸವ ಸಂಭ್ರಮವನ್ನು ಆವಿಸ್ಮರಣೀಯವಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು.ಧನ ಸಾಹಯ ಮಾಡುವುದರ ಮುಖೇನ ಎಲ್ಲರೂ ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಶಾಲಾ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ಮಂಜಯ್ಯ ಪೂಜಾರಿ ಮಾತನಾಡಿ,ಸುಮಾರು ನೂರು ವರ್ಷ ತುಂಬಲಿರುವ ಯಳಜಿತ್ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.ಹಾಗಾಗಿ ಶಾಲೆಯಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕ್ಕೆನ್ನುವ ಉದ್ದೇಶದೊಂದಿಗೆ ಈಗಾಗಲೆ ಚಾಲನೆ ನೀಡಲಾಗಿದೆ.ಎಲ್ಲರೂ ಸಹಕಾರ ನೀಡಬೇಕೆಂದು ವಿನಂತಿಕೊಂಡರು.
ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ ಮಾತನಾಡಿ,ಶಾಲೆಯನ್ನು ಉಳಿಸಿ ಬೆಳೆಸಬೇಕು ಎನ್ನುವ ಉದ್ದೇಶದಿಂದ ಶತಮಾನೋತ್ಸವ ಕಟ್ಟಡ ನಿರ್ಮಾಣ ಸಹಿತ,ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ಸಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾರ್ಯ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಗಿದೆ.ಶಾಲೆಯ ಅಭಿವೃದ್ಧಿಗೆ ಸರಕಾರ ಮತ್ತು ದಾನಿಗಳು ಸಹಕರಿಸಬೇಕೆಂದು ಕೇಳಿಕೊಂಡರು.ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಗೌರವಾಧ್ಯಕ್ಷ ಚಂದನ್ ಬಿಲ್ಲವ,ಖಜಾಂಜಿ ಕೆ.ಎಂ ಕೊಠಾರಿ,ಕಾರ್ಯದರ್ಶಿ ಪದ್ಮಾವತಿ,ಶಾಲಾ ಎಸ್ಡಿಎಂಸಿ ಅಧ್ಯಕ್ಷ ಸುಕುಮಾರ ಗೌಡ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ,ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…