ಪ್ರಾದೇಶಿಕ ಸುದ್ದಿ

ಬಂಟ್ವಾಡಿ ಶಾಲೆ ನಿವೃತ್ತ ಮುಖ್ಯೋಪಾಧ್ಯಾಯ ರಘುರಾಮ ನಾಯ್ಕ್‍ಗೆ ಬೀಳ್ಕೊಡುಗೆ

Share

ಕುಂದಾಪುರ:ಬೈಂದೂರು ವಲಯದ ನ್ಯೂ ಅನುದಾನಿತ ಹಿರಿಯ ಪ್ರಾಥಮಿಕ ಬಂಟ್ವಾಡಿ ಶಾಲೆಯಲ್ಲಿ ಸುಮಾರು 39 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಗೊಂಡಿರುವ ಶಾಲಾ ಮುಖ್ಯೋಪಾಧ್ಯಾಯರಾದ ರಘುರಾಮ ನಾಯ್ಕ್ ಅವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಹಾಗೂ ವಿದ್ಯಾರ್ಥಿ ಪೋಷಕರ ಸಂಘದ ವತಿಯಿಂದ ಬಂಟ್ವಾಡಿ ಶಾಲೆಯಲ್ಲಿ ಭಾನುವಾರ ಅದ್ದೂರಿಯಾಗಿ ನಡೆಯಿತು.
ನಿವೃತ್ತ ಮುಖ್ಯೋಪಾಧ್ಯಾಯ ರಘುರಾಮ ನಾಯ್ಕ್ ಅವರು ಸನ್ಮಾನವನ್ನು ಸ್ವೀಕರಿಸಿ ಮಾತನಾಡಿ,ವಿದ್ಯಾರ್ಥಿಗಳು ಸಮಾಜದಲ್ಲಿ ಸುಶಿಕ್ಷಿತರಾಗಿ ಬಾಳಿದಾಗ ಮಾತ್ರ ಶಿಕ್ಷಕರ ಪರಿಶ್ರಮ ಸಾರ್ಥಕಗೊಳ್ಳುತ್ತದೆ.ಅಪರಿಚಿತ ಊರಿನಲ್ಲಿ ಶಿಕ್ಷಕ ಸೇವೆ ಮಾಡಲು ಬಂದಂತಹ ಸಮಯದಲ್ಲಿ ಊರಿನವರು ತೋರಿಸಿದ ಪ್ರೀತಿ ಸದಾ ಕಾಲ ಉಳಿದುಕೊಳ್ಳಲಿದೆ ಎಂದು ಹೇಳಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ಮೊಗವೀರ ಮಾತನಾಡಿ,ಶಾಲಾ ಮುಖ್ಯೋಪಾಧ್ಯಾಯರು ನಿವೃತ್ತಿಗೊಂಡಿರುವುದರಿಂದ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ.ಶಿಕ್ಷಣ ಇಲಾಖೆ ಹೆಚ್ಚುವರಿಯಾಗಿ ಶಿಕ್ಷಕರನ್ನು ನೇಮಕ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.
ಶಾಲಾ ಸಂಚಾಲಕ ಅರುಣ್‍ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಪ್ರೊಫೆಸರ್ ಕೆಆರ್‍ಇಸಿ ಸುರತ್ಕಲ್ ಜಯಕರ ಹೆಗ್ಡೆ ಸನ್ಮಾನಿಸಿ ಶುಭಹಾರೈಸಿದರು.ಉದ್ಯಮಿ ರಾಮರಾಯ್ ಕಾಮತ್,ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ನಾಗೇಶ್ ಶ್ಯಾನುಭಾಗ್,ದುಬೈ ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ ಹಾಡಿಮನೆ,ನಿವೃತ್ತ ಅಂಗನವಾಡಿ ಶಿಕ್ಷಕಿ ಲೀಲಾವತಿ ಹೆಬ್ಬಾರ್ ಕೆಳಾಕಳಿ,ಶಾಲಾ ವಿದ್ಯಾರ್ಥಿ ಪೋಷಕರ ಸಂಘದ ಅಧ್ಯಕ್ಷೆ ಜಯಲಕ್ಷ್ಮೀ ಬಂಟ್ವಾಡಿ,ಮಕ್ಕಳ ಪೆÇೀಷಕರು,ಹಳೆ ವಿದ್ಯಾರ್ಥಿಗಳು,ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಅರುಣ್ ಕುಮಾರ್ ಸ್ವಾಗತಿಸಿದರು.ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಂಭು ನಿರೂಪಿಸಿದರು.ಶ್ರೀಕಾಂತ ಶ್ಯಾನುಭಾಗ್ ವಾಚಿಸಿದರು.ಗೌರವ ಶಿಕ್ಷಕಿ ಪಲ್ಲವಿ ವಂದಿಸಿದರು.ವಿದ್ಯಾರ್ಥಿಗಳು,ಹಳೆ ವಿದ್ಯಾರ್ಥಿಗಳು,ಶಿಕ್ಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.



Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

2 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago