ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯರಾತ್ರಿ ಕಳವು ಗೈದಿರುವ ಹುಂಡಿ ಹಣವನ್ನು ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಗುಲಿಯಲ್ಲಿ ಕಳ್ಳ ಬಿಟ್ಟು ಹೋಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಹೆಮ್ಮಾಡಿ ಪ್ರಾಥಮಿಕ ಶಾಲೆ ಜಗುಲಿ ಮೇಲೆ ಹಸಿರು ಚೀಲ ಇರುವುದದನ್ನು ಶನಿವಾರ ಗಮನಿಸಿರುವ ಶಾಲೆ ಶಿಕ್ಷಕರು ಅಷ್ಟೇನು ಗಂಭೀರವಾಗಿ ಪರಿಗಣಿಸಿರಲಿಲ್ಲ.ಭಾನುವಾರ ಶಾಲೆಗೆ ರಜೆ ಇದ್ದಿದ್ದು.ಸೋಮವಾರ ಅದೇ ಸ್ಥಳದಲ್ಲಿದ್ದ ಚೀಲವನ್ನು ಗಮನಿಸಿದ ವಿದ್ಯಾರ್ಥಿಗಳು ಬೀಡಿಸಿ ನೋಡಿದಾಗ ಹಣ ಇರುವುದು ಬೆಳಕಿಗೆ ಬಂದಿದೆ.ಕೂಡಲೆ ದೇವಸ್ಥಾನದ ಸಮಿತಿ ಅವರಿಗೆ ಶಾಲೆ ಶಿಕ್ಷಕರು ತಿಳಿಸಿದ್ದಾರೆ.ಮಾಹಿತಿಯನ್ನು ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೆÇಲೀಸರು ಹಣದ ಚೀಲವನ್ನು ವಶಕ್ಕೆ ಪಡೆದಿದ್ದಾರೆ.ಚೀಲದಲ್ಲಿ ಹತ್ತು ರೂಪಾಯಿ ಮುಖ ಬೆಲೆಯ ನೋಟುಗಳು ಮಾತ್ರ ಪತ್ತೆ ಆಗಿದ್ದು ಅಂದಾಜು 3035.ರೂ ಇದೆ ಎಂದು ತಿಳಿದು ಬಂದಿದೆ.ದೊಡ್ಡ ಮೊತ್ತದ ಮುಖ ಬೆಲೆಯನ್ನು ಹೊಂದಿರುವ ನೋಟುಗಳನ್ನು ಕಳ್ಳ ಒಯ್ಯುದಿರುವ ಬಗ್ಗೆ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಕಳ್ಳ ಶಾಲೆಯ ಆವರಣವನ್ನು ಪ್ರವೇಶಿಸಿ ಶಾಲೆ ಜಗುಲಿಯಲ್ಲಿ ಕುಳಿತು ಕೊಂಡು ಹುಂಡಿ ಹಣವನ್ನು ವ್ಯವಸ್ಥಿತವಾದ ರೀತಿಯಲ್ಲಿ ಜೋಡಿಸಿಕೊಂಡು ಸ್ಥಳದಿಂದ ಪರಾರಿಯಾಗಿರ ಬಹುದೆಂದು ಘಟನೆಯ ಮೇಲನೋಟ ಸಾಕ್ಷಿ ನುಡಿಯುತ್ತಿದೆ ಎಂದು ಗ್ರಾಮಸ್ಥರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಕುಂದಾಪುರ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮೋದಿ ಅಭಿಮಾನಿ ಉದಯ ಖಾರ್ವಿ ಅವರು ತ್ರಾಸಿ ಮತ್ತು…
ಕುಂದಾಪುರ:ಎನ್.ರಮೇಶ ದೇವಾಡಿಗ ವಂಡ್ಸೆ 2004ರಲ್ಲಿ ಬೆಂಗಳೂರಿನಲ್ಲಿ ಹಿಂಡ್ ಪ್ಯಾಕ್ ಕಂಪನಿಯನ್ನು ಪ್ರಾರಂಭಿಸಿ ನೂರಾರು ಜನರಿಗೆ ಉದ್ಯೋಗ ಕಲ್ಪಿಸಿ,ಅಂತರರಾಷ್ಟ್ರೀಯ ಸಂಸ್ಥೆಯಾದ ರೋಟರಿ…
ಕುಂದಾಪುರ: ಅನಾರೋಗ್ಯ ಪೀಡಿತರಾದ ಕುಟುಂಬದಲ್ಲಿನ ಸಂಬಂಧಿ ಮಹಿಳೆಯೊಬ್ಬರಿಗೆ ಯಕೃತ್ತು ದಾನ ಮಾಡಿದ ಅಂಕಿತಾ (ಅರ್ಚನಾ) ಕಾಮತ್ ಅವರು ಅನಾರೋಗ್ಯ ಪೀಡಿತರಾಗಿ…
ಕುಂದಾಪುರ:ಸುಮಾರು 96 ವರ್ಷಗಳ ಸುದೀರ್ಘ ಇತಿಹಾಸವುಳ್ಳ ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಅಂಡ್ ರೀಡಿಂಗ್ ರೂಮ್ ಸೊಸೈಟಿ (ರಿ) ಕುಂದಾಪುರ ಅದರ…
ಕುಂದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ಉಡುಪಿ ಅದರ ಆಲೂರು ಶಾಖೆ ನೂತನ ಪದಾಧಿಕಾರಿಗಳ…
ಕುದಾಪುರ:ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ),ಜಿಲ್ಲಾ ಸಮಿತಿ ಉಡುಪಿ,ಕುಂದಾಪುರ ತಾಲೂಕು ಸಮಿತಿ ವತಿಯಿಂದ ಶೋಷಿತರ ಸ್ವಾಭಿಮಾನಿ ಸಮಾವೇಶ…