ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯರಾತ್ರಿ ಕಳವು ಗೈದಿರುವ ಹುಂಡಿ ಹಣವನ್ನು ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಗುಲಿಯಲ್ಲಿ ಕಳ್ಳ ಬಿಟ್ಟು ಹೋಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಹೆಮ್ಮಾಡಿ ಪ್ರಾಥಮಿಕ ಶಾಲೆ ಜಗುಲಿ ಮೇಲೆ ಹಸಿರು ಚೀಲ ಇರುವುದದನ್ನು ಶನಿವಾರ ಗಮನಿಸಿರುವ ಶಾಲೆ ಶಿಕ್ಷಕರು ಅಷ್ಟೇನು ಗಂಭೀರವಾಗಿ ಪರಿಗಣಿಸಿರಲಿಲ್ಲ.ಭಾನುವಾರ ಶಾಲೆಗೆ ರಜೆ ಇದ್ದಿದ್ದು.ಸೋಮವಾರ ಅದೇ ಸ್ಥಳದಲ್ಲಿದ್ದ ಚೀಲವನ್ನು ಗಮನಿಸಿದ ವಿದ್ಯಾರ್ಥಿಗಳು ಬೀಡಿಸಿ ನೋಡಿದಾಗ ಹಣ ಇರುವುದು ಬೆಳಕಿಗೆ ಬಂದಿದೆ.ಕೂಡಲೆ ದೇವಸ್ಥಾನದ ಸಮಿತಿ ಅವರಿಗೆ ಶಾಲೆ ಶಿಕ್ಷಕರು ತಿಳಿಸಿದ್ದಾರೆ.ಮಾಹಿತಿಯನ್ನು ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೆÇಲೀಸರು ಹಣದ ಚೀಲವನ್ನು ವಶಕ್ಕೆ ಪಡೆದಿದ್ದಾರೆ.ಚೀಲದಲ್ಲಿ ಹತ್ತು ರೂಪಾಯಿ ಮುಖ ಬೆಲೆಯ ನೋಟುಗಳು ಮಾತ್ರ ಪತ್ತೆ ಆಗಿದ್ದು ಅಂದಾಜು 3035.ರೂ ಇದೆ ಎಂದು ತಿಳಿದು ಬಂದಿದೆ.ದೊಡ್ಡ ಮೊತ್ತದ ಮುಖ ಬೆಲೆಯನ್ನು ಹೊಂದಿರುವ ನೋಟುಗಳನ್ನು ಕಳ್ಳ ಒಯ್ಯುದಿರುವ ಬಗ್ಗೆ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಕಳ್ಳ ಶಾಲೆಯ ಆವರಣವನ್ನು ಪ್ರವೇಶಿಸಿ ಶಾಲೆ ಜಗುಲಿಯಲ್ಲಿ ಕುಳಿತು ಕೊಂಡು ಹುಂಡಿ ಹಣವನ್ನು ವ್ಯವಸ್ಥಿತವಾದ ರೀತಿಯಲ್ಲಿ ಜೋಡಿಸಿಕೊಂಡು ಸ್ಥಳದಿಂದ ಪರಾರಿಯಾಗಿರ ಬಹುದೆಂದು ಘಟನೆಯ ಮೇಲನೋಟ ಸಾಕ್ಷಿ ನುಡಿಯುತ್ತಿದೆ ಎಂದು ಗ್ರಾಮಸ್ಥರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…