ಕುಂದಾಪುರ:ತಾಲೂಕಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಶುಕ್ರವಾರ ಮಧ್ಯರಾತ್ರಿ ಕಳವು ಗೈದಿರುವ ಹುಂಡಿ ಹಣವನ್ನು ದೇವಸ್ಥಾನದ ಸಮೀಪದಲ್ಲಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಗುಲಿಯಲ್ಲಿ ಕಳ್ಳ ಬಿಟ್ಟು ಹೋಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಹೆಮ್ಮಾಡಿ ಪ್ರಾಥಮಿಕ ಶಾಲೆ ಜಗುಲಿ ಮೇಲೆ ಹಸಿರು ಚೀಲ ಇರುವುದದನ್ನು ಶನಿವಾರ ಗಮನಿಸಿರುವ ಶಾಲೆ ಶಿಕ್ಷಕರು ಅಷ್ಟೇನು ಗಂಭೀರವಾಗಿ ಪರಿಗಣಿಸಿರಲಿಲ್ಲ.ಭಾನುವಾರ ಶಾಲೆಗೆ ರಜೆ ಇದ್ದಿದ್ದು.ಸೋಮವಾರ ಅದೇ ಸ್ಥಳದಲ್ಲಿದ್ದ ಚೀಲವನ್ನು ಗಮನಿಸಿದ ವಿದ್ಯಾರ್ಥಿಗಳು ಬೀಡಿಸಿ ನೋಡಿದಾಗ ಹಣ ಇರುವುದು ಬೆಳಕಿಗೆ ಬಂದಿದೆ.ಕೂಡಲೆ ದೇವಸ್ಥಾನದ ಸಮಿತಿ ಅವರಿಗೆ ಶಾಲೆ ಶಿಕ್ಷಕರು ತಿಳಿಸಿದ್ದಾರೆ.ಮಾಹಿತಿಯನ್ನು ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಕುಂದಾಪುರ ಪೆÇಲೀಸರು ಹಣದ ಚೀಲವನ್ನು ವಶಕ್ಕೆ ಪಡೆದಿದ್ದಾರೆ.ಚೀಲದಲ್ಲಿ ಹತ್ತು ರೂಪಾಯಿ ಮುಖ ಬೆಲೆಯ ನೋಟುಗಳು ಮಾತ್ರ ಪತ್ತೆ ಆಗಿದ್ದು ಅಂದಾಜು 3035.ರೂ ಇದೆ ಎಂದು ತಿಳಿದು ಬಂದಿದೆ.ದೊಡ್ಡ ಮೊತ್ತದ ಮುಖ ಬೆಲೆಯನ್ನು ಹೊಂದಿರುವ ನೋಟುಗಳನ್ನು ಕಳ್ಳ ಒಯ್ಯುದಿರುವ ಬಗ್ಗೆ ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇವಸ್ಥಾನದಲ್ಲಿ ಕಳ್ಳತನ ಮಾಡಿದ ಬಳಿಕ ಕಳ್ಳ ಶಾಲೆಯ ಆವರಣವನ್ನು ಪ್ರವೇಶಿಸಿ ಶಾಲೆ ಜಗುಲಿಯಲ್ಲಿ ಕುಳಿತು ಕೊಂಡು ಹುಂಡಿ ಹಣವನ್ನು ವ್ಯವಸ್ಥಿತವಾದ ರೀತಿಯಲ್ಲಿ ಜೋಡಿಸಿಕೊಂಡು ಸ್ಥಳದಿಂದ ಪರಾರಿಯಾಗಿರ ಬಹುದೆಂದು ಘಟನೆಯ ಮೇಲನೋಟ ಸಾಕ್ಷಿ ನುಡಿಯುತ್ತಿದೆ ಎಂದು ಗ್ರಾಮಸ್ಥರು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…