ಕುಂದಾಪುರ:ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಇಂತಹ ಕಾರ್ಯಕ್ರಮಗಳು ಬಹಳಷ್ಟು ಸಹಕಾರಿ ಯಾಗಲಿದೆ ಎಂದು ಅಂತರಾಷ್ಟ್ರೀಯ ಜಾದುಗಾರ ಸಾಹಿತಿ ಓಂ ಗಣೇಶ್ ಉಪ್ಪುಂದ ಹೇಳಿದರು.
ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ವತಿಯಿಂದ ಕುಂದಾಪುರ ಮೊಗವೀರ ಭವನದಲ್ಲಿ ಶುಕ್ರವಾರ ನಡೆದ ಜನತಾ ದಿಬ್ಬಣ 2ಕೆ24 ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಪ್ರಿನ್ಸಿಪಾಲ್ ಗಣೇಶ ಮೊಗವೀರ ಮಾತನಾಡಿ,ನಿರಂತರ ಪಾಠ ಪ್ರವಚನಗಳಿಂದ ನಾಲ್ಕು ಗೋಡೆಗಳ ಮಧ್ಯದಲ್ಲಿ ಬಸವಳಿಯುವ ಎಳೆಯ ಮನಸುಗಳು ಚೈತನ್ಯದಿಂದ ಕೂಡಿರಬೇಕು ಎನ್ನುವ ಉದ್ದೇಶದಿಂದ ಇವೊಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ಹೇಳಿದದರು.
ಗಾಯಕಿ ವಿಜಯಲಕ್ಷ್ಮಿ ಮೆಟ್ಟಿನಹೊಳೆ,ಜನತಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜು ಕಾಳಾವರ,ಜನತಾ ನ್ಯೂ ಇಂಗ್ಲೀμï ಮೀಡಿಯಂ ಸ್ಕೂಲ್ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ,ಕಾಲೇಜಿನ ಬೋಧಕ,ಬೋಧಕೇತರ ವೃಂದದವರು,ವಿದ್ಯಾರ್ಥಿಗಳು,ಪೆÇೀಷಕರು ಉಪಸ್ಥಿತರಿದ್ದರು.ಉಪನ್ಯಾಸಕ ಉದಯ ನಾಯ್ಕ ನಿರೂಪಿಸಿದರು,ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ ವಂದಿಸಿದರು.ಕಾಲೇಜಿನ ವಿವಿಧ ತಂಡಗಳಿಂದ ಪ್ರತಿಭಾ ಪ್ರದರ್ಶನ ಜರುಗಿತು.ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾತಯಿತು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…