ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ.
ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದ್ದು.ಉಚಿತ ತರಬೇತಿ,ಉಚಿತ ವಸತಿ ವ್ಯವಸ್ಥೆ,ಊಟ,ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ಸಿಗಲಿದೆ.ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ದೊರಕಲಿದ್ದು ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ಸಮೃದ್ಧ ಬೈಂದೂರು ಸೇವಾ ಟ್ರಸ್ಟ್ ಕೋರಿ ಕೊಂಡಿದೆ.
ಇದೊಂದು ಅಂತಾರಾಷ್ಟ್ರೀಯ ಉದ್ಯೋಗ ಮೇಳವಾಗಿದ್ದು ಜಪಾನ್,ಮಲೇಷಿಯಾ, ಜರ್ಮನ್,ಕ್ರೋವೆಷಿಯಾ, ಗಲ್ಫ್ ರಾಷ್ಟ್ರಗಳ ವಿವಿಧ ಕಂಪೆನಿಗಳು ಭಾಗವಹಿಸಲಿವೆ. ವಿದ್ಯಾರ್ಥಿಗಳು, ಪದವೀಧರರು,ಪಿಯುಸಿ ಓದಿರುವರು ಹೀಗೆ ಎಲ್ಲ ವರ್ಗದವರಿಗೂ ವಿದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದಾದ ವ್ಯವಸ್ಥೆ ಇದರಲಿಲ್ಲದೆ.ಪದವಿ, ಸ್ನಾತಕೋತ್ತರ ಪದವಿ,ತಾಂತ್ರಿಕ ಕೋರ್ಸ್,ತಾಂತ್ರಿಕೇತರ ಕೋರ್ಸ್ ಹೀಗೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಉದ್ಯೋಗಳು ಲಭ್ಯವಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಮೂಲಕವೇ ಇದು ನಡೆಯುವುದರಿಂದ ಸಂಪೂರ್ಣ ನಿರ್ವಹಣೆಯನ್ನು ಎನ್ಎಸ್ಡಿಸಿಐ ಮಾಡಲಿದೆ.
ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಲು ಆಗಸ್ಟ್ 28 ಕೊನೆಯ ದಿನ. ಲಿಂಕ್
https://forms.office.com/r/T73nGPz24h ಮೂಲಕ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 7901302000, 9778417835 ಅಥವಾ 7204166276 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಮೃದ್ಧ ಬೈಂದೂರು ಟ್ರಸ್ಟ್ನ ಪ್ರಕಟನೆ ತಿಳಿಸಿದೆ.
ಏನೇನು ಉದ್ಯೋಗಾವಕಾಶ
ನರ್ಸಿಂಗ್ ಕೇರ್, ಬಿಲ್ಡಿಂಗ್ ಕ್ಲೀನಿಂಗ್ ಮ್ಯಾನೇಜ್ಮೆಂಟ್, ಕೈಗಾರಿಕ ಉತ್ಪನ್ನ ಸಿದ್ಧಡಿಸುವುದು, ನಿರ್ಮಾಣ ವಲಯ, ಏವಿಯೇಷನ್, ಕೃಷಿ, ಮೀನುಗಾರಿಕೆ ಮತ್ತು ಸಂಬಂಧಿತ ಉದ್ಯೋಗ, ಆಹಾರ ಪೂರೈಕೆ, ರೈಲ್ವೇ ಟ್ರಾನ್ಸ್ಪೋರ್ಟ್, ಫಾರೆಸ್ಟ್ರೀ ಹೀಗೆ ಹಲವು ಉದ್ಯೋಗಾವಕಾಶವಿದೆ.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…