ಕುಂದಾಪುರ

ಆಗಸ್ಟ್.31 ರಂದು ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜನೆ

Share

ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್‌ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ.
ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದ್ದು.ಉಚಿತ ತರಬೇತಿ,ಉಚಿತ ವಸತಿ ವ್ಯವಸ್ಥೆ,ಊಟ,ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ಸಿಗಲಿದೆ.ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ದೊರಕಲಿದ್ದು ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ಸಮೃದ್ಧ ಬೈಂದೂರು ಸೇವಾ ಟ್ರಸ್ಟ್ ಕೋರಿ ಕೊಂಡಿದೆ.
ಇದೊಂದು ಅಂತಾರಾಷ್ಟ್ರೀಯ ಉದ್ಯೋಗ ಮೇಳವಾಗಿದ್ದು ಜಪಾನ್,ಮಲೇಷಿಯಾ, ಜರ್ಮನ್,ಕ್ರೋವೆಷಿಯಾ, ಗಲ್ಫ್‌ ರಾಷ್ಟ್ರಗಳ ವಿವಿಧ ಕಂಪೆನಿಗಳು ಭಾಗವಹಿಸಲಿವೆ. ವಿದ್ಯಾರ್ಥಿಗಳು, ಪದವೀಧರರು,ಪಿಯುಸಿ ಓದಿರುವರು ಹೀಗೆ ಎಲ್ಲ ವರ್ಗದವರಿಗೂ ವಿದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದಾದ ವ್ಯವಸ್ಥೆ ಇದರಲಿಲ್ಲದೆ.ಪದವಿ, ಸ್ನಾತಕೋತ್ತರ ಪದವಿ,ತಾಂತ್ರಿಕ ಕೋರ್ಸ್,ತಾಂತ್ರಿಕೇತರ ಕೋರ್ಸ್ ಹೀಗೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಉದ್ಯೋಗಳು ಲಭ್ಯವಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಮೂಲಕವೇ ಇದು ನಡೆಯುವುದರಿಂದ ಸಂಪೂರ್ಣ ನಿರ್ವಹಣೆಯನ್ನು ಎನ್‌ಎಸ್‌ಡಿಸಿಐ ಮಾಡಲಿದೆ.
ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಲು ಆಗಸ್ಟ್ 28 ಕೊನೆಯ ದಿನ. ಲಿಂಕ್
https://forms.office.com/r/T73nGPz24h ಮೂಲಕ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 7901302000, 9778417835 ಅಥವಾ 7204166276 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಮೃದ್ಧ ಬೈಂದೂರು ಟ್ರಸ್ಟ್‌‌ನ ಪ್ರಕಟನೆ ತಿಳಿಸಿದೆ.

ಏನೇನು ಉದ್ಯೋಗಾವಕಾಶ
ನರ್ಸಿಂಗ್ ಕೇರ್, ಬಿಲ್ಡಿಂಗ್ ಕ್ಲೀನಿಂಗ್ ಮ್ಯಾನೇಜ್ಮೆಂಟ್, ಕೈಗಾರಿಕ ಉತ್ಪನ್ನ ಸಿದ್ಧಡಿಸುವುದು, ನಿರ್ಮಾಣ ವಲಯ, ಏವಿಯೇಷನ್, ಕೃಷಿ, ಮೀನುಗಾರಿಕೆ ಮತ್ತು ಸಂಬಂಧಿತ ಉದ್ಯೋಗ, ಆಹಾರ ಪೂರೈಕೆ, ರೈಲ್ವೇ ಟ್ರಾನ್ಸ್‌ಪೋರ್ಟ್‌, ಫಾರೆಸ್ಟ್ರೀ ಹೀಗೆ ಹಲವು ಉದ್ಯೋಗಾವಕಾಶವಿದೆ.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 days ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 days ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 weeks ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

4 weeks ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

1 month ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

1 month ago