ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ.
ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದ್ದು.ಉಚಿತ ತರಬೇತಿ,ಉಚಿತ ವಸತಿ ವ್ಯವಸ್ಥೆ,ಊಟ,ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ಸಿಗಲಿದೆ.ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ದೊರಕಲಿದ್ದು ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ಸಮೃದ್ಧ ಬೈಂದೂರು ಸೇವಾ ಟ್ರಸ್ಟ್ ಕೋರಿ ಕೊಂಡಿದೆ.
ಇದೊಂದು ಅಂತಾರಾಷ್ಟ್ರೀಯ ಉದ್ಯೋಗ ಮೇಳವಾಗಿದ್ದು ಜಪಾನ್,ಮಲೇಷಿಯಾ, ಜರ್ಮನ್,ಕ್ರೋವೆಷಿಯಾ, ಗಲ್ಫ್ ರಾಷ್ಟ್ರಗಳ ವಿವಿಧ ಕಂಪೆನಿಗಳು ಭಾಗವಹಿಸಲಿವೆ. ವಿದ್ಯಾರ್ಥಿಗಳು, ಪದವೀಧರರು,ಪಿಯುಸಿ ಓದಿರುವರು ಹೀಗೆ ಎಲ್ಲ ವರ್ಗದವರಿಗೂ ವಿದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದಾದ ವ್ಯವಸ್ಥೆ ಇದರಲಿಲ್ಲದೆ.ಪದವಿ, ಸ್ನಾತಕೋತ್ತರ ಪದವಿ,ತಾಂತ್ರಿಕ ಕೋರ್ಸ್,ತಾಂತ್ರಿಕೇತರ ಕೋರ್ಸ್ ಹೀಗೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಉದ್ಯೋಗಳು ಲಭ್ಯವಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಮೂಲಕವೇ ಇದು ನಡೆಯುವುದರಿಂದ ಸಂಪೂರ್ಣ ನಿರ್ವಹಣೆಯನ್ನು ಎನ್ಎಸ್ಡಿಸಿಐ ಮಾಡಲಿದೆ.
ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಲು ಆಗಸ್ಟ್ 28 ಕೊನೆಯ ದಿನ. ಲಿಂಕ್
https://forms.office.com/r/T73nGPz24h ಮೂಲಕ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 7901302000, 9778417835 ಅಥವಾ 7204166276 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಮೃದ್ಧ ಬೈಂದೂರು ಟ್ರಸ್ಟ್ನ ಪ್ರಕಟನೆ ತಿಳಿಸಿದೆ.
ಏನೇನು ಉದ್ಯೋಗಾವಕಾಶ
ನರ್ಸಿಂಗ್ ಕೇರ್, ಬಿಲ್ಡಿಂಗ್ ಕ್ಲೀನಿಂಗ್ ಮ್ಯಾನೇಜ್ಮೆಂಟ್, ಕೈಗಾರಿಕ ಉತ್ಪನ್ನ ಸಿದ್ಧಡಿಸುವುದು, ನಿರ್ಮಾಣ ವಲಯ, ಏವಿಯೇಷನ್, ಕೃಷಿ, ಮೀನುಗಾರಿಕೆ ಮತ್ತು ಸಂಬಂಧಿತ ಉದ್ಯೋಗ, ಆಹಾರ ಪೂರೈಕೆ, ರೈಲ್ವೇ ಟ್ರಾನ್ಸ್ಪೋರ್ಟ್, ಫಾರೆಸ್ಟ್ರೀ ಹೀಗೆ ಹಲವು ಉದ್ಯೋಗಾವಕಾಶವಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…