ಕುಂದಾಪುರ

ಆಗಸ್ಟ್.31 ರಂದು ಬೈಂದೂರಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ಉದ್ಯೋಗ ಮೇಳ ಆಯೋಜನೆ

Share

ಕುಂದಾಪುರ:ಸಮೃದ್ಧ ಬೈಂದೂರು ವತಿಯಿಂದ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ(ಅಂತಾರಾಷ್ಟ್ರೀಯ) ಹಾಗೂ ಅಜಿನುರಹಾ ಸಂಸ್ಥೆಯ ಸಹಭಾಗಿತ್ವದಲ್ಲಿ ಆಗಸ್ಟ್‌ 31ರಂದು ಬೈಂದೂರಿನ ಜೆ.ಎನ್.ಆರ್. ಅಡಿಟೋರಿಯಂನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳ ನಡೆಯಲಿದೆ.
ವಿದೇಶದಲ್ಲಿ ಉದ್ಯೋಗ ಬಯಸುವವರಿಗೆ ಸುವರ್ಣಾವಕಾಶವನ್ನು ಕಲ್ಪಿಸಲಾಗಿದ್ದು.ಉಚಿತ ತರಬೇತಿ,ಉಚಿತ ವಸತಿ ವ್ಯವಸ್ಥೆ,ಊಟ,ಉಪಹಾರದ ಜತೆಗೆ ವೀಸಾ ಹಾಗೂ ವಿಮಾನ ಟಿಕೆಟ್ ಕೂಡ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ಸಿಗಲಿದೆ.ವಿದೇಶಿ ಭಾಷೆ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡಬಹುದು. ಇಂತಹದ್ದೊಂದು ಅವಕಾಶ ಬೈಂದೂರಿಗೆ ಇದೇ ಮೊದಲ ಬಾರಿಗೆ ದೊರಕಲಿದ್ದು ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳುವಂತೆ ಸಮೃದ್ಧ ಬೈಂದೂರು ಸೇವಾ ಟ್ರಸ್ಟ್ ಕೋರಿ ಕೊಂಡಿದೆ.
ಇದೊಂದು ಅಂತಾರಾಷ್ಟ್ರೀಯ ಉದ್ಯೋಗ ಮೇಳವಾಗಿದ್ದು ಜಪಾನ್,ಮಲೇಷಿಯಾ, ಜರ್ಮನ್,ಕ್ರೋವೆಷಿಯಾ, ಗಲ್ಫ್‌ ರಾಷ್ಟ್ರಗಳ ವಿವಿಧ ಕಂಪೆನಿಗಳು ಭಾಗವಹಿಸಲಿವೆ. ವಿದ್ಯಾರ್ಥಿಗಳು, ಪದವೀಧರರು,ಪಿಯುಸಿ ಓದಿರುವರು ಹೀಗೆ ಎಲ್ಲ ವರ್ಗದವರಿಗೂ ವಿದೇಶದಲ್ಲಿ ಉದ್ಯೋಗಾವಕಾಶ ಪಡೆಯಬಹುದಾದ ವ್ಯವಸ್ಥೆ ಇದರಲಿಲ್ಲದೆ.ಪದವಿ, ಸ್ನಾತಕೋತ್ತರ ಪದವಿ,ತಾಂತ್ರಿಕ ಕೋರ್ಸ್,ತಾಂತ್ರಿಕೇತರ ಕೋರ್ಸ್ ಹೀಗೆ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಉದ್ಯೋಗಳು ಲಭ್ಯವಿದೆ. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯ ಮೂಲಕವೇ ಇದು ನಡೆಯುವುದರಿಂದ ಸಂಪೂರ್ಣ ನಿರ್ವಹಣೆಯನ್ನು ಎನ್‌ಎಸ್‌ಡಿಸಿಐ ಮಾಡಲಿದೆ.
ಉದ್ಯೋಗ ಮೇಳಕ್ಕೆ ನೋಂದಾಯಿಸಿಕೊಳ್ಳಲು ಆಗಸ್ಟ್ 28 ಕೊನೆಯ ದಿನ. ಲಿಂಕ್
https://forms.office.com/r/T73nGPz24h ಮೂಲಕ ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ 7901302000, 9778417835 ಅಥವಾ 7204166276 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಮೃದ್ಧ ಬೈಂದೂರು ಟ್ರಸ್ಟ್‌‌ನ ಪ್ರಕಟನೆ ತಿಳಿಸಿದೆ.

ಏನೇನು ಉದ್ಯೋಗಾವಕಾಶ
ನರ್ಸಿಂಗ್ ಕೇರ್, ಬಿಲ್ಡಿಂಗ್ ಕ್ಲೀನಿಂಗ್ ಮ್ಯಾನೇಜ್ಮೆಂಟ್, ಕೈಗಾರಿಕ ಉತ್ಪನ್ನ ಸಿದ್ಧಡಿಸುವುದು, ನಿರ್ಮಾಣ ವಲಯ, ಏವಿಯೇಷನ್, ಕೃಷಿ, ಮೀನುಗಾರಿಕೆ ಮತ್ತು ಸಂಬಂಧಿತ ಉದ್ಯೋಗ, ಆಹಾರ ಪೂರೈಕೆ, ರೈಲ್ವೇ ಟ್ರಾನ್ಸ್‌ಪೋರ್ಟ್‌, ಫಾರೆಸ್ಟ್ರೀ ಹೀಗೆ ಹಲವು ಉದ್ಯೋಗಾವಕಾಶವಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago