ಪ್ರಾದೇಶಿಕ ಸುದ್ದಿ

ನಾವುಂದ:ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

Share

ಕುಂದಾಪುರ:ನಾವುಂದ ಮಸ್ಕಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಹಣ್ಣು ಕಾಯಿ ಮತ್ತು ಮಂಗಳಾರತಿ ಸೇವೆ,ಮಹಾ ಪೂಜೆ,ಅನ್ನ ಸಂತರ್ಪಣೆ ಸೇವೆಯನ್ನು ನೆರವೇರಿಸಲಾಯಿತು.ಭಜನೆ,ಕೃಷ್ಣ ಜನನ ಕಾರ್ಯಕ್ರಮ ಜರುಗಿತು.

ಬಾಲ ಕೃಷ್ಣ ವೇಷ ಸ್ಪರ್ಧೆ,ಹಗ್ಗಜಗ್ಗಾಟ,ಸಂಗೀತ ಮೊಸರು ಕುಡಿಕೆ ಒಡೆಯುವುದು ಹಾಗೂ ಓಕುಳಿ ಆಟ ಜರುಗಿತು.ಭಕ್ತರು ಶ್ರೀ ದೇವರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.ಶ್ರೀ ಕೃಷ್ಣ ದೇವರ ನಾಮಸ್ಮರಣೆಯನ್ನು ಕೊಂಡಾಡಿದರು.
ಸತೀಶ್ ಭಟ್ ಮಸ್ಕಿ ಮಾತನಾಡಿ,ಭಕ್ತರು ಮತ್ತು ದಾನಿಗಳ ಸಹಕಾರದಿಂದ ಅಷ್ಟಮಿ ಉತ್ಸವವನ್ನು ಹಲವಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ.ದೇವಸ್ಥಾನದಲ್ಲಿ ಉತ್ಪತ್ತಿ ಕಮ್ಮಿ ಇದ್ದು ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ.ಮೂಜುರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನವನ್ನು ಅಭಿವೃದ್ಧಿ ಗೊಳಿಸಲು ಸರಕಾರ ವಿಶೇಷ ಅನುದಾನ ನೀಡಬೇಕು ಎಂದು ಹೇಳಿದರು.
ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಕಾರಂತ ನಾವುಂದ ಮಾತನಾಡಿ,ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಎರಡು ದಿನಗಳಿಂದ ವಿಜೃಂಭಣೆಯಿಂದ ನಡೆದಿದೆ.ಶ್ರೀ ಗೋಪಾಲ ಕೃಷ್ಣ ದೇವರಿಗೆ ಮರದ ತೊಟ್ಟಿಲನ್ನು ಸಮರ್ಪಣೆ ಮಾಡಲಾಗಿದ್ದು.ಶ್ರೀ ದೇವತಾ ಕಾರ್ಯಗಳಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿ ಮಂಡಳಿ ಅಧ್ಯಕ್ಷರು ಬಾಬು ಶೆಟ್ಟಿ, ಸುರೇಶ ಖಾರ್ವಿ,ರಘು ಪೂಜಾರಿ,ಚಂದ್ರ ಪೂಜಾರಿ,ಬಾಬು ಪೂಜಾರಿ,ಗೌರಿ ಪೂಜಾರಿ,ಗಿರಿಜಾ ಮೊಗವೀರ,ಗ್ರಾಮ ಪಂಚಾಯಿತಿ ಸದಸ್ಯ ರಾಮ ಎಸ್ ಖಾರ್ವಿ,ಗಣೇಶ ಪೂಜಾರಿ ,ಅಭಿಷೇಕ ನಾವುಂದ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ:ಜಗದೀಶ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ -9916284048

Advertisement

Share
Team Kundapur Times

Recent Posts

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

6 days ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

1 month ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago

ಶಿಕ್ಷಕ ಸುರೇಂದ್ರಗೆ ಮಕ್ಕಳ ಮಿತ್ರ ಪ್ರಶಸ್ತಿ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…

2 months ago

ತ್ರಾಸಿ:ನಿಂತ್ತಿದ್ದ ಲಾರಿಯಲ್ಲಿ ಚಾಲಕನ ಶವ ಪತ್ತೆ

ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…

2 months ago

ಮರವಂತೆ ಸಮುದ್ರ ಕಿನಾರೆ ಸ್ವಚ್ಚತೆ

ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…

3 months ago