ಕುಂದಾಪುರ:ನಾವುಂದ ಮಸ್ಕಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಹಣ್ಣು ಕಾಯಿ ಮತ್ತು ಮಂಗಳಾರತಿ ಸೇವೆ,ಮಹಾ ಪೂಜೆ,ಅನ್ನ ಸಂತರ್ಪಣೆ ಸೇವೆಯನ್ನು ನೆರವೇರಿಸಲಾಯಿತು.ಭಜನೆ,ಕೃಷ್ಣ ಜನನ ಕಾರ್ಯಕ್ರಮ ಜರುಗಿತು.
ಬಾಲ ಕೃಷ್ಣ ವೇಷ ಸ್ಪರ್ಧೆ,ಹಗ್ಗಜಗ್ಗಾಟ,ಸಂಗೀತ ಮೊಸರು ಕುಡಿಕೆ ಒಡೆಯುವುದು ಹಾಗೂ ಓಕುಳಿ ಆಟ ಜರುಗಿತು.ಭಕ್ತರು ಶ್ರೀ ದೇವರ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮಿಸಿದರು.ಶ್ರೀ ಕೃಷ್ಣ ದೇವರ ನಾಮಸ್ಮರಣೆಯನ್ನು ಕೊಂಡಾಡಿದರು.
ಸತೀಶ್ ಭಟ್ ಮಸ್ಕಿ ಮಾತನಾಡಿ,ಭಕ್ತರು ಮತ್ತು ದಾನಿಗಳ ಸಹಕಾರದಿಂದ ಅಷ್ಟಮಿ ಉತ್ಸವವನ್ನು ಹಲವಾರು ವರ್ಷಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ.ದೇವಸ್ಥಾನದಲ್ಲಿ ಉತ್ಪತ್ತಿ ಕಮ್ಮಿ ಇದ್ದು ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ.ಮೂಜುರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನವನ್ನು ಅಭಿವೃದ್ಧಿ ಗೊಳಿಸಲು ಸರಕಾರ ವಿಶೇಷ ಅನುದಾನ ನೀಡಬೇಕು ಎಂದು ಹೇಳಿದರು.
ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಕಾರಂತ ನಾವುಂದ ಮಾತನಾಡಿ,ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಎರಡು ದಿನಗಳಿಂದ ವಿಜೃಂಭಣೆಯಿಂದ ನಡೆದಿದೆ.ಶ್ರೀ ಗೋಪಾಲ ಕೃಷ್ಣ ದೇವರಿಗೆ ಮರದ ತೊಟ್ಟಿಲನ್ನು ಸಮರ್ಪಣೆ ಮಾಡಲಾಗಿದ್ದು.ಶ್ರೀ ದೇವತಾ ಕಾರ್ಯಗಳಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿ ಮಂಡಳಿ ಅಧ್ಯಕ್ಷರು ಬಾಬು ಶೆಟ್ಟಿ, ಸುರೇಶ ಖಾರ್ವಿ,ರಘು ಪೂಜಾರಿ,ಚಂದ್ರ ಪೂಜಾರಿ,ಬಾಬು ಪೂಜಾರಿ,ಗೌರಿ ಪೂಜಾರಿ,ಗಿರಿಜಾ ಮೊಗವೀರ,ಗ್ರಾಮ ಪಂಚಾಯಿತಿ ಸದಸ್ಯ ರಾಮ ಎಸ್ ಖಾರ್ವಿ,ಗಣೇಶ ಪೂಜಾರಿ ,ಅಭಿಷೇಕ ನಾವುಂದ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ:ಜಗದೀಶ
ನಮ್ಮ ಜಾಲತಾಣದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ -9916284048
ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…
ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…
ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…