ಕುಂದಾಪುರ:ಬೈಂದೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಖೋ ಖೋ ಪಂದ್ಯಾಟ ಸರಕಾರಿ ಹಿರಿಯ ಪ್ರಾಥಮಿಕ ಮೊವಾಡಿ ಶಾಲೆಯಲ್ಲಿ ಮಂಗಳವಾರ ನಡೆಯಿತು.ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ ಉದ್ಘಾಟಿಸಿ ಶುಭಹಾರೈಸಿದರು.
ತ್ರಾಸಿ ಪಂಚಾಯಿತಿ ಉಪಾಧ್ಯಕ್ಷೆ ಹೇಮಾ,ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಬೈಂದೂರು ದೈಹಿಕ ಪರಿವೀಕ್ಷಣಾಧಿಕಾರಿ ಅರುಣ ಶೆಟ್ಟಿ,ಮೊವಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ಮತ್ತು ಎಸ್ಡಿಎಂಸಿ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿಗಾರ್,ದೈಹಿಕ ಶಿಕ್ಷಕರಾದ ಗಣೇಶ ಹಾಗೂ ಸಂತೋಷ,ಹಾಲು ಉತ್ಪಾದಕರ ಸಂಘ ಮೊವಾಡಿ ಕಾರ್ಯನಿರ್ವಹಣಾಧಿಕಾರಿ ಶೇಖರ ಗಾಣಿಗ ಉಪಸ್ಥಿತರಿದ್ದರು.ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದನ್ನೊತಿ ಹೊಂದಿರುವ ಚಂದ್ರಶೇಖರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಮೊವಾಡಿ ಶಾಲೆ ಮುಖ್ಯೋಪಾಧ್ಯಾಯಿನಿ ಶರಾವತಿ ಸ್ವಾಗತಿಸಿದರು.ಶಿಕ್ಷಕಿ ಭಾಗಿರಥಿ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ವಂದಿಸಿದರು.
ಫಲಿತಾಂಶ ವಿವರ:ಬಾಲಕರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಕಂಚಿಕಾನ್ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಶಾಲೆ ಚಿತ್ತೂರು ದ್ವಿತೀಯ ಸ್ಥಾನ ಮತ್ತು ಬಾಲಕಿಯರ ವಿಭಾಗದಲ್ಲಿ ಸ.ಹಿ.ಪ್ರಾ ಶಾಲೆ ಹಕ್ಲಾಡಿ ಪ್ರಥಮ ಸ್ಥಾನ ಹಾಗೂ ಸ.ಹಿ.ಪ್ರಾ ಚಿತ್ತೂರು ಶಾಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…